25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

ಸುಲ್ಕೇರಿ: ಮುಂದಿನ ಯುವ  ಪೀಳಿಗೆಯು  ಸಂಸ್ಕಾರವಂತರಾಗಿ ಮೌಲ್ಯಯುತ ಜೀವನ ನಡೆಸಬೇಕು ಎಂಬ ಉದ್ದೇಶಕ್ಕಾಗಿ ಶ್ರೀರಾಮ ಶಾಲೆಯನ್ನು ಪ್ರಾರಂಭಿಸಲಾಗಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ  ಡಾll ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಅವರು ಜ 2 ರಂದು  ಸುಲ್ಕೇರಿಯ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ  ಸಾಂಸ್ಕೃತಿಕ ವೈಭವದ ಮೊದಲು ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ  ಮಾತನಾಡಿದರು. 
  ವೇದಿಕೆಯಲ್ಲಿ ಕಾರ್ಕಳದ ಸಿ.ಎ.ಕಮಲಾಕ್ಷ ಕಾಮತ್, ಬೆಳ್ತಂಗಡಿಯ ದಂತ ವೈದ್ಯ ಶಶಿಧರ ಡೋಂಗ್ರೆ, ಶಿರ್ತಾಡಿಯ ವೈದ್ಯ ಆಶೀರ್ವಾದ ಎಂ.ಪಿ., ಶಾಲಾ ಉನ್ನತಿಗೆ ಸಹಕಾರ ನೀಡಿದ ದಾನಿ ಸಂಸ್ಥೆಗಳಾದ ಬೆಂಗಳೂರಿನ ಅಪೋಟೆಕ್ಸ್ ರಿಸರ್ಚ್ ಪ್ರೈ.ಲಿ. ಆಡಳಿತಾಧಿಕಾರಿ ಜೋಸ್ ಝೇವಿಯರ್, ಪ್ರಧಾನ ಪ್ರಬಂಧಕ ದೇವರಾಜ್, ಮಾನವ ಚಾರಿಟೀಸ್‌ನ ಗೌರವ ಕಾರ್ಯದರ್ಶಿ ರಾಜೇಂದ್ರ ಕುಲಕರ್ಣಿ, ಫೆಡರಲ್ ಮುಘಲ್ ಇಂಡಿಯಾ ಲಿ. ನ ಮುಖ್ಯ ಮಾನವ ಸಂಪನ್ಮೂಲಾಧಿಕಾರಿ ಪ್ರಕಾಶ್ ಎ.ಎಸ್., ಯೋಜನಾ ಪ್ರಬಂಧಕ ದಲ್ಜಿತ್ ಸಿಂಗ್ ಉಪಸ್ಥಿತರಿದ್ದರು.
 ಶಾಲಾ ವಿದ್ಯಾರ್ಥಿಗಳು ಕಲ್ಲಡ್ಕ ಭಟ್ ಅವರಿಗೆ ಆಂಜನೇಯನ ಚಿತ್ರವಿರುವ ಭಗವಾಧ್ವಜವನ್ನು ನೀಡಿ ಗೌರವಿಸಿದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜು ಪೂಜಾರಿ ಸ್ವಾಗತಿಸಿದರು. ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಪ್ರಸ್ತಾವಿಸಿದರು. ಸದಸ್ಯ ಭಾಸ್ಕರ ಸಾಲಿಯಾನ್ ವಂದಿಸಿದರು. ಉಪಾಧ್ಯಕ್ಷ ಚಂದ್ರಕಾಂತ ಗೋರೆ ನಿರ್ವಹಿಸಿದರು.ಬಳಿಕ ಸುಮಾರು 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ, ವಿಶಿಷ್ಟ ಕಲಾ ಪ್ರದರ್ಶನಗಳನ್ನು ಪ್ರಸ್ತುತಪಡಿಸಿದರು.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya
error: Content is protected !!