37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

ಉಜಿರೆ : ಭಾರತದಂತಹ ದೇಶಗಳ ಹಣಕಾಸಿನ ಬಹುಪಾಲು ಪೆಟ್ರೋಲ್ , ಡೀಸೆಲ್ ಇತ್ಯಾದಿ ಮುಗಿದುಹೋಗುವ ಇಂಧನಗಳಿಗೆ ವ್ಯಯವಾಗುತ್ತಿದೆ. ಹಾಗೆಯೇ ವಾತಾವರಣದ ಮೇಲೆಯೂ ವ್ಯತಿರಿಕ್ತ ಪರಿಣಾಮವಾಗುತ್ತಿದೆ. ಇದನ್ನು ತಡೆಗಟ್ಟಬೇಕಾದರೆ ಹಾಗೂ ಪ್ರಕೃತಿಗೆ ಪೂರಕವಾಗುವ ಪಳೆಯುಳಿಕೆ ಇಂಧನಗಳಂತಹ ಇಂಧನ ಹಾಗೆಯೇ ನವೀಕೃತ ಇಂಧನಗಳಾದ ಸೋಲಾರ್ , ಪವನಶಕ್ತಿ ವಿದ್ಯುತ್ , ಬಯೋಗ್ಯಾಸ್ ಇತ್ಯಾದಿಗಳಿಂದ ಮಾತ್ರ ಸಾಧ್ಯ. ಆದ್ದರಿಂದ ಇನ್ನು ಕೆಲವೇ ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ ಶಕ್ತಿಗಳ ಬಳಕೆ ಅನಿವಾರ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ವಿದ್ಯಾಲಯದ ಎಲೆಕ್ಟ್ರಿಕ್ ವಿಭಾಗದ ಪ್ರಾಧ್ಯಾಪಕ ಡಾ.ಸತ್ಯನಾರಾಯಣ ಭಟ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ನವೀಕೃತ ಇಂಧನ – ದೇಶದ ಉನ್ನತಿಯ ಸಾಧನ ಎಂಬ ನವೀಕೃತ ಇಂಧನ ಜಾಗೃತಿ ಕುರಿತು ಮಾತನಾಡಿದರು.

ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಮಾತನಾಡಿ ನಾವು ಮಾಡುವ ಪ್ರತಿದಿನದ ಚಟುವಟಿಕೆಗಳಲ್ಲಿ ಜಾಗ್ರತೆಯಾಗಿ ವ್ಯವಹರಿಸಿದರೆ ಅದೇ ನಾವೆಲ್ಲ ಮಾಡಿಕೊಳ್ಳುವ ಜಾಗೃತಿ ಹಾಗೂ ಪ್ರಕೃತಿಯೊಂದಿಗೆ ಬೆರೆತು ಅದಕ್ಕೆ ಹಾನಿಯಾಗದಂತೆ ಇರಬೇಕು ಎಂದು ಹೇಳಿದರು.

ರಾ.ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಉಪಸ್ಥಿತರಿದ್ದರು.

ಸೃಷ್ಠಿ ಎಸ್ ಎಲ್ ಸ್ವಾಗತಿಸಿ , ಸುಮಿತ್ ವಂದಿಸಿದರು. ಮಹಾಲಕ್ಷ್ಮೀ ನಿರೂಪಿಸಿದರು.

Related posts

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

Suddi Udaya
error: Content is protected !!