23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

ಉಜಿರೆ : ಭಾರತದಂತಹ ದೇಶಗಳ ಹಣಕಾಸಿನ ಬಹುಪಾಲು ಪೆಟ್ರೋಲ್ , ಡೀಸೆಲ್ ಇತ್ಯಾದಿ ಮುಗಿದುಹೋಗುವ ಇಂಧನಗಳಿಗೆ ವ್ಯಯವಾಗುತ್ತಿದೆ. ಹಾಗೆಯೇ ವಾತಾವರಣದ ಮೇಲೆಯೂ ವ್ಯತಿರಿಕ್ತ ಪರಿಣಾಮವಾಗುತ್ತಿದೆ. ಇದನ್ನು ತಡೆಗಟ್ಟಬೇಕಾದರೆ ಹಾಗೂ ಪ್ರಕೃತಿಗೆ ಪೂರಕವಾಗುವ ಪಳೆಯುಳಿಕೆ ಇಂಧನಗಳಂತಹ ಇಂಧನ ಹಾಗೆಯೇ ನವೀಕೃತ ಇಂಧನಗಳಾದ ಸೋಲಾರ್ , ಪವನಶಕ್ತಿ ವಿದ್ಯುತ್ , ಬಯೋಗ್ಯಾಸ್ ಇತ್ಯಾದಿಗಳಿಂದ ಮಾತ್ರ ಸಾಧ್ಯ. ಆದ್ದರಿಂದ ಇನ್ನು ಕೆಲವೇ ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ ಶಕ್ತಿಗಳ ಬಳಕೆ ಅನಿವಾರ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ವಿದ್ಯಾಲಯದ ಎಲೆಕ್ಟ್ರಿಕ್ ವಿಭಾಗದ ಪ್ರಾಧ್ಯಾಪಕ ಡಾ.ಸತ್ಯನಾರಾಯಣ ಭಟ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ನವೀಕೃತ ಇಂಧನ – ದೇಶದ ಉನ್ನತಿಯ ಸಾಧನ ಎಂಬ ನವೀಕೃತ ಇಂಧನ ಜಾಗೃತಿ ಕುರಿತು ಮಾತನಾಡಿದರು.

ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಮಾತನಾಡಿ ನಾವು ಮಾಡುವ ಪ್ರತಿದಿನದ ಚಟುವಟಿಕೆಗಳಲ್ಲಿ ಜಾಗ್ರತೆಯಾಗಿ ವ್ಯವಹರಿಸಿದರೆ ಅದೇ ನಾವೆಲ್ಲ ಮಾಡಿಕೊಳ್ಳುವ ಜಾಗೃತಿ ಹಾಗೂ ಪ್ರಕೃತಿಯೊಂದಿಗೆ ಬೆರೆತು ಅದಕ್ಕೆ ಹಾನಿಯಾಗದಂತೆ ಇರಬೇಕು ಎಂದು ಹೇಳಿದರು.

ರಾ.ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಉಪಸ್ಥಿತರಿದ್ದರು.

ಸೃಷ್ಠಿ ಎಸ್ ಎಲ್ ಸ್ವಾಗತಿಸಿ , ಸುಮಿತ್ ವಂದಿಸಿದರು. ಮಹಾಲಕ್ಷ್ಮೀ ನಿರೂಪಿಸಿದರು.

Related posts

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya
error: Content is protected !!