25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

ಉಜಿರೆ : ಭಾರತದಂತಹ ದೇಶಗಳ ಹಣಕಾಸಿನ ಬಹುಪಾಲು ಪೆಟ್ರೋಲ್ , ಡೀಸೆಲ್ ಇತ್ಯಾದಿ ಮುಗಿದುಹೋಗುವ ಇಂಧನಗಳಿಗೆ ವ್ಯಯವಾಗುತ್ತಿದೆ. ಹಾಗೆಯೇ ವಾತಾವರಣದ ಮೇಲೆಯೂ ವ್ಯತಿರಿಕ್ತ ಪರಿಣಾಮವಾಗುತ್ತಿದೆ. ಇದನ್ನು ತಡೆಗಟ್ಟಬೇಕಾದರೆ ಹಾಗೂ ಪ್ರಕೃತಿಗೆ ಪೂರಕವಾಗುವ ಪಳೆಯುಳಿಕೆ ಇಂಧನಗಳಂತಹ ಇಂಧನ ಹಾಗೆಯೇ ನವೀಕೃತ ಇಂಧನಗಳಾದ ಸೋಲಾರ್ , ಪವನಶಕ್ತಿ ವಿದ್ಯುತ್ , ಬಯೋಗ್ಯಾಸ್ ಇತ್ಯಾದಿಗಳಿಂದ ಮಾತ್ರ ಸಾಧ್ಯ. ಆದ್ದರಿಂದ ಇನ್ನು ಕೆಲವೇ ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ ಶಕ್ತಿಗಳ ಬಳಕೆ ಅನಿವಾರ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ವಿದ್ಯಾಲಯದ ಎಲೆಕ್ಟ್ರಿಕ್ ವಿಭಾಗದ ಪ್ರಾಧ್ಯಾಪಕ ಡಾ.ಸತ್ಯನಾರಾಯಣ ಭಟ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ನವೀಕೃತ ಇಂಧನ – ದೇಶದ ಉನ್ನತಿಯ ಸಾಧನ ಎಂಬ ನವೀಕೃತ ಇಂಧನ ಜಾಗೃತಿ ಕುರಿತು ಮಾತನಾಡಿದರು.

ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಮಾತನಾಡಿ ನಾವು ಮಾಡುವ ಪ್ರತಿದಿನದ ಚಟುವಟಿಕೆಗಳಲ್ಲಿ ಜಾಗ್ರತೆಯಾಗಿ ವ್ಯವಹರಿಸಿದರೆ ಅದೇ ನಾವೆಲ್ಲ ಮಾಡಿಕೊಳ್ಳುವ ಜಾಗೃತಿ ಹಾಗೂ ಪ್ರಕೃತಿಯೊಂದಿಗೆ ಬೆರೆತು ಅದಕ್ಕೆ ಹಾನಿಯಾಗದಂತೆ ಇರಬೇಕು ಎಂದು ಹೇಳಿದರು.

ರಾ.ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಉಪಸ್ಥಿತರಿದ್ದರು.

ಸೃಷ್ಠಿ ಎಸ್ ಎಲ್ ಸ್ವಾಗತಿಸಿ , ಸುಮಿತ್ ವಂದಿಸಿದರು. ಮಹಾಲಕ್ಷ್ಮೀ ನಿರೂಪಿಸಿದರು.

Related posts

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!