25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತತಾಲೂಕು ಸುದ್ದಿ

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತವಾದ ಘಟನೆ ಜ.3ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆಂಜ ಗ್ರಾಮ ಬೆಳ್ತಂಗಡಿ ನಿವಾಸಿ ರಂಜಿತ್ (35ವ) ಎಂಬವರ ದೂರಿನಂತೆ, ಜ.3 ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ, ಅವರು ತಮ್ಮ ಕೆಎ11ಇಎಂ3952 ನೇ ಮೋಟಾರು ಸೈಕಲಿನಲ್ಲಿ ಹೋಗುತ್ತಿರುವಾಗ, ಅವರ ವಿರುದ್ದ ದಿಕ್ಕಿನಿಂದ ಕೆಎ70ಇ9961ನೇ ದ್ವಿಚಕ್ರ ವಾಹನವನ್ನು ಅದರ ಸವಾರಳಾದ ಸ್ವಾತಿ(26ವ) ಎಂಬವರು, ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ರಂಜಿತ್ ರ ಮೋಟಾರು ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ, ಎರಡೂ ದ್ವಿಚಕ್ರ ವಾಹನಗಳ ಸವಾರರು ರಸ್ತೆಗೆ ಬಿದ್ದು ಗಾಯಗಳಾಗಿರುತ್ತದೆ. ಗಾಯಾಳುಗಳು ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯಲ್ಲಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 03/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!