25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತತಾಲೂಕು ಸುದ್ದಿ

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತವಾದ ಘಟನೆ ಜ.3ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆಂಜ ಗ್ರಾಮ ಬೆಳ್ತಂಗಡಿ ನಿವಾಸಿ ರಂಜಿತ್ (35ವ) ಎಂಬವರ ದೂರಿನಂತೆ, ಜ.3 ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ, ಅವರು ತಮ್ಮ ಕೆಎ11ಇಎಂ3952 ನೇ ಮೋಟಾರು ಸೈಕಲಿನಲ್ಲಿ ಹೋಗುತ್ತಿರುವಾಗ, ಅವರ ವಿರುದ್ದ ದಿಕ್ಕಿನಿಂದ ಕೆಎ70ಇ9961ನೇ ದ್ವಿಚಕ್ರ ವಾಹನವನ್ನು ಅದರ ಸವಾರಳಾದ ಸ್ವಾತಿ(26ವ) ಎಂಬವರು, ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ರಂಜಿತ್ ರ ಮೋಟಾರು ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ, ಎರಡೂ ದ್ವಿಚಕ್ರ ವಾಹನಗಳ ಸವಾರರು ರಸ್ತೆಗೆ ಬಿದ್ದು ಗಾಯಗಳಾಗಿರುತ್ತದೆ. ಗಾಯಾಳುಗಳು ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯಲ್ಲಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 03/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya

ಬೆಳಾಲು: ಮಂಗಿಲ ನಿವಾಸಿ, ಕಬಡ್ಡಿ ಆಟಗಾರ ಸುನಿತ್‌ ಮಂಗಿಲ ನಿಧನ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya
error: Content is protected !!