September 6, 2026
ಅಪಘಾತತಾಲೂಕು ಸುದ್ದಿ

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತವಾದ ಘಟನೆ ಜ.3ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆಂಜ ಗ್ರಾಮ ಬೆಳ್ತಂಗಡಿ ನಿವಾಸಿ ರಂಜಿತ್ (35ವ) ಎಂಬವರ ದೂರಿನಂತೆ, ಜ.3 ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ, ಅವರು ತಮ್ಮ ಕೆಎ11ಇಎಂ3952 ನೇ ಮೋಟಾರು ಸೈಕಲಿನಲ್ಲಿ ಹೋಗುತ್ತಿರುವಾಗ, ಅವರ ವಿರುದ್ದ ದಿಕ್ಕಿನಿಂದ ಕೆಎ70ಇ9961ನೇ ದ್ವಿಚಕ್ರ ವಾಹನವನ್ನು ಅದರ ಸವಾರಳಾದ ಸ್ವಾತಿ(26ವ) ಎಂಬವರು, ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ರಂಜಿತ್ ರ ಮೋಟಾರು ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ, ಎರಡೂ ದ್ವಿಚಕ್ರ ವಾಹನಗಳ ಸವಾರರು ರಸ್ತೆಗೆ ಬಿದ್ದು ಗಾಯಗಳಾಗಿರುತ್ತದೆ. ಗಾಯಾಳುಗಳು ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯಲ್ಲಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 03/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ಇಂದಬೆಟ್ಟುನಲ್ಲಿ ಮೆಸ್ಕಾಂ 33ಕೆವಿ ಸಬ್‌ಸ್ಟೇಷನ್ ನಿರ್ಮಾಣಕ್ಕೆ 66 ಸೆಂಟ್ಸ್ ಜಾಗ ಮಂಜೂರು

Suddi Udaya

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya
error: Content is protected !!