23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

ಉಜಿರೆ : ಧರ್ಮಸ್ಥಳ ನೇರ್ತನೆ ನಿವಾಸಿಯಾದ ಪ್ರಸ್ತುತ ಸೋಮಂತ್ತಡ್ಕದಲ್ಲಿ ನೆಲೆಸಿರುವ ಫ್ರಾನ್ಸಿಸ್ ಜೆ ಅವರು ಸೇನೆಯಲ್ಲಿ 22 ವರ್ಷ ಕರ್ತವ್ಯ ನಿರ್ವಹಿಸಿ ಡಿ 31ರಂದು ಸೇವಾ ನಿವೃತ್ತರಾಗಿ ಊರಿಗೆ ಆಗಮಿಸಿದ ಫ್ರಾನ್ಸಿಸ್ ಜೆ ರವರನ್ನು ಪತ್ನಿ ಬೀನಾ ಫ್ರಾನ್ಸಿಸ್, ಮಕ್ಕಳಾದ ಫಿಯಾ, ಫೆಬಿನ್ ಅನ್ವಿರೋಸ್ ರವರೊಂದಿಗೆ ಉಜಿರೆಯಲ್ಲಿ ಸ್ವಾಗತ ಸ್ವೀಕರಿಸಿದರು.

ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಯ ನಿರ್ದೇಶಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಧರ್ಮಗುರುಗಳು ವಂದನಿಯ ಫಾ. ಶಾಜಿ ಮಾತ್ಯು ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿ, ನಿವೃತ್ತ ಬದುಕು ಸಮಾಜ ಸೇವೆಯ ಬದುಕಾಗಲಿ ಎಂದು ಶುಭ ಕೋರಿದರು. ಕೆ ಎಸ್ ಎಂ ಸಿ ಎ ಮುಖಂಡ ಜೈಸನ್ ಪಟ್ಟೆರಿ ಸಹ ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ ಕಾರಂತ್ , ಉದ್ಯಮಿ ರವಿ ಚಕ್ಕಿತ್ತಾಯ, ಸಚಿನ್ ಬಿಡೆ, ಕೆಎಸ್ಎಂಸಿಎ ಕೇಂದ್ರ ಸಮಿತಿ ಪಿಆರ್ ಒ ಸೆಬಾಸ್ಟಿಯನ್ ಪಿ ಸಿ, ಕೆ ಎಸ್ ಎಂ ಸಿ ಎ ಉಜಿರೆ ಘಟಕ ಅಧ್ಯಕ್ಷರಾದ ಜೋಬಿ ಮುಳವನ, ಡನಿಷ್, ಡೇವಿಸ್ ಮತ್ತು ಊರವರು ಉಪಸ್ಥಿತರಿದರು.

Related posts

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya
error: Content is protected !!