25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

ಬೆಳ್ತಂಗಡಿ: ನ್ಯಾಯಾಂಗ ನಿಂದನೆ ಆರೋಪದಡಿ ಬೆಳ್ತಂಗಡಿಯ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾರವರಿಗೆ ಜ.11ರಂದು ಪುನಃ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಲು ಹೈಕೋರ್ಟ್ ನಿರ್ದೇಶನ ನೀಡಿದೆ.

ಬಬ್ಬುಕಟ್ಟೆ ಉಜಿರೆ ನಿವಾಸಿ ಜಯಪ್ರಕಾಶ ಶೆಟ್ಟಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ಹಿರಿಯ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಹಾಗೂ ನ್ಯಾ.ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು. ಆಗ ಹಿಂದಿನ ನಿರ್ದೇಶನದಂತೆ ತಿಮರೋಡಿ ದಂಪತಿ ಹಾಜರಾಗಿದ್ದರು. ನ್ಯಾಯಾಲಯ ಇಬ್ಬರ ಹಾಜರಾತಿ ದಾಖಲಿಸಿಕೊಂಡು, ಸಮಯದ ಅಭಾವದ ಕಾರಣ ವಿಚಾರಣೆ ನಡೆಸದೆ ಮುಂದಿನ ಗುರುವಾರ ಪುನಃ ಹಾಜರಾಗಲು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಮಹೇಶ್ ಶೆಟ್ಟಿ ತಿಮರೋಡಿ ಜಮೀನು ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್‌ಲ್ಲಿ ತಕರಾರು ಅರ್ಜಿ ಸಲ್ಲಿಸಲಾಗಿತ್ತು. ಅದರ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಒತ್ತುವರಿ ಜಾಗ ತೆರವುಗೊಳಿಸಲು 2019ರ ಜು.18ರಂದು ಆದೇಶಿಸಿತ್ತು. ಅದರಂತೆ ಉಜಿರೆ ಪಿಡಿಒ ಸ್ಥಳಕ್ಕೆ ಭೇಟಿ ನೀಡಿದ್ದಾಗ ಹೈಕೋರ್ಟ್ ನ್ಯಾಯಮೂರ್ತಿಗಳ ಬಗ್ಗೆ ಮಹೇಶ್‌ ಶೆಟ್ಟಿ ತಿಮರೋಡಿ ನಿಂದನಾತ್ಮಕವಾಗಿ ಮಾತನಾಡಿದ್ದರು. ನ್ಯಾಯಾಲಯದ ಆದೇಶ ಪಾಲಿಸದ ಹಾಗೂ ನ್ಯಾಯಮೂರ್ತಿಗಳ ಕುರಿತು ನಿಂದನೆ ಮಾಡಿದ ಆರೋಪದಲ್ಲಿ ತಿಮರೋಡಿ ವಿರುದ್ದ ನ್ಯಾಯಾಂಗ ನಿಂದನೆ ದಾವೆ ಹೂಡಲಾಗಿದೆ.

Related posts

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya
error: Content is protected !!