33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

ಬೆಳ್ತಂಗಡಿ: ನ್ಯಾಯಾಂಗ ನಿಂದನೆ ಆರೋಪದಡಿ ಬೆಳ್ತಂಗಡಿಯ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾರವರಿಗೆ ಜ.11ರಂದು ಪುನಃ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಲು ಹೈಕೋರ್ಟ್ ನಿರ್ದೇಶನ ನೀಡಿದೆ.

ಬಬ್ಬುಕಟ್ಟೆ ಉಜಿರೆ ನಿವಾಸಿ ಜಯಪ್ರಕಾಶ ಶೆಟ್ಟಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ಹಿರಿಯ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಹಾಗೂ ನ್ಯಾ.ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು. ಆಗ ಹಿಂದಿನ ನಿರ್ದೇಶನದಂತೆ ತಿಮರೋಡಿ ದಂಪತಿ ಹಾಜರಾಗಿದ್ದರು. ನ್ಯಾಯಾಲಯ ಇಬ್ಬರ ಹಾಜರಾತಿ ದಾಖಲಿಸಿಕೊಂಡು, ಸಮಯದ ಅಭಾವದ ಕಾರಣ ವಿಚಾರಣೆ ನಡೆಸದೆ ಮುಂದಿನ ಗುರುವಾರ ಪುನಃ ಹಾಜರಾಗಲು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಮಹೇಶ್ ಶೆಟ್ಟಿ ತಿಮರೋಡಿ ಜಮೀನು ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್‌ಲ್ಲಿ ತಕರಾರು ಅರ್ಜಿ ಸಲ್ಲಿಸಲಾಗಿತ್ತು. ಅದರ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಒತ್ತುವರಿ ಜಾಗ ತೆರವುಗೊಳಿಸಲು 2019ರ ಜು.18ರಂದು ಆದೇಶಿಸಿತ್ತು. ಅದರಂತೆ ಉಜಿರೆ ಪಿಡಿಒ ಸ್ಥಳಕ್ಕೆ ಭೇಟಿ ನೀಡಿದ್ದಾಗ ಹೈಕೋರ್ಟ್ ನ್ಯಾಯಮೂರ್ತಿಗಳ ಬಗ್ಗೆ ಮಹೇಶ್‌ ಶೆಟ್ಟಿ ತಿಮರೋಡಿ ನಿಂದನಾತ್ಮಕವಾಗಿ ಮಾತನಾಡಿದ್ದರು. ನ್ಯಾಯಾಲಯದ ಆದೇಶ ಪಾಲಿಸದ ಹಾಗೂ ನ್ಯಾಯಮೂರ್ತಿಗಳ ಕುರಿತು ನಿಂದನೆ ಮಾಡಿದ ಆರೋಪದಲ್ಲಿ ತಿಮರೋಡಿ ವಿರುದ್ದ ನ್ಯಾಯಾಂಗ ನಿಂದನೆ ದಾವೆ ಹೂಡಲಾಗಿದೆ.

Related posts

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!