25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

ಬೆಳ್ತಂಗಡಿ: ನ್ಯಾಯಾಂಗ ನಿಂದನೆ ಆರೋಪದಡಿ ಬೆಳ್ತಂಗಡಿಯ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾರವರಿಗೆ ಜ.11ರಂದು ಪುನಃ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಲು ಹೈಕೋರ್ಟ್ ನಿರ್ದೇಶನ ನೀಡಿದೆ.

ಬಬ್ಬುಕಟ್ಟೆ ಉಜಿರೆ ನಿವಾಸಿ ಜಯಪ್ರಕಾಶ ಶೆಟ್ಟಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ಹಿರಿಯ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಹಾಗೂ ನ್ಯಾ.ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು. ಆಗ ಹಿಂದಿನ ನಿರ್ದೇಶನದಂತೆ ತಿಮರೋಡಿ ದಂಪತಿ ಹಾಜರಾಗಿದ್ದರು. ನ್ಯಾಯಾಲಯ ಇಬ್ಬರ ಹಾಜರಾತಿ ದಾಖಲಿಸಿಕೊಂಡು, ಸಮಯದ ಅಭಾವದ ಕಾರಣ ವಿಚಾರಣೆ ನಡೆಸದೆ ಮುಂದಿನ ಗುರುವಾರ ಪುನಃ ಹಾಜರಾಗಲು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಮಹೇಶ್ ಶೆಟ್ಟಿ ತಿಮರೋಡಿ ಜಮೀನು ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್‌ಲ್ಲಿ ತಕರಾರು ಅರ್ಜಿ ಸಲ್ಲಿಸಲಾಗಿತ್ತು. ಅದರ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಒತ್ತುವರಿ ಜಾಗ ತೆರವುಗೊಳಿಸಲು 2019ರ ಜು.18ರಂದು ಆದೇಶಿಸಿತ್ತು. ಅದರಂತೆ ಉಜಿರೆ ಪಿಡಿಒ ಸ್ಥಳಕ್ಕೆ ಭೇಟಿ ನೀಡಿದ್ದಾಗ ಹೈಕೋರ್ಟ್ ನ್ಯಾಯಮೂರ್ತಿಗಳ ಬಗ್ಗೆ ಮಹೇಶ್‌ ಶೆಟ್ಟಿ ತಿಮರೋಡಿ ನಿಂದನಾತ್ಮಕವಾಗಿ ಮಾತನಾಡಿದ್ದರು. ನ್ಯಾಯಾಲಯದ ಆದೇಶ ಪಾಲಿಸದ ಹಾಗೂ ನ್ಯಾಯಮೂರ್ತಿಗಳ ಕುರಿತು ನಿಂದನೆ ಮಾಡಿದ ಆರೋಪದಲ್ಲಿ ತಿಮರೋಡಿ ವಿರುದ್ದ ನ್ಯಾಯಾಂಗ ನಿಂದನೆ ದಾವೆ ಹೂಡಲಾಗಿದೆ.

Related posts

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

Suddi Udaya

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!