22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

ಬೆಳ್ತಂಗಡಿ: ನ್ಯಾಯಾಂಗ ನಿಂದನೆ ಆರೋಪದಡಿ ಬೆಳ್ತಂಗಡಿಯ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾರವರಿಗೆ ಜ.11ರಂದು ಪುನಃ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಲು ಹೈಕೋರ್ಟ್ ನಿರ್ದೇಶನ ನೀಡಿದೆ.

ಬಬ್ಬುಕಟ್ಟೆ ಉಜಿರೆ ನಿವಾಸಿ ಜಯಪ್ರಕಾಶ ಶೆಟ್ಟಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ಹಿರಿಯ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಹಾಗೂ ನ್ಯಾ.ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು. ಆಗ ಹಿಂದಿನ ನಿರ್ದೇಶನದಂತೆ ತಿಮರೋಡಿ ದಂಪತಿ ಹಾಜರಾಗಿದ್ದರು. ನ್ಯಾಯಾಲಯ ಇಬ್ಬರ ಹಾಜರಾತಿ ದಾಖಲಿಸಿಕೊಂಡು, ಸಮಯದ ಅಭಾವದ ಕಾರಣ ವಿಚಾರಣೆ ನಡೆಸದೆ ಮುಂದಿನ ಗುರುವಾರ ಪುನಃ ಹಾಜರಾಗಲು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಮಹೇಶ್ ಶೆಟ್ಟಿ ತಿಮರೋಡಿ ಜಮೀನು ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್‌ಲ್ಲಿ ತಕರಾರು ಅರ್ಜಿ ಸಲ್ಲಿಸಲಾಗಿತ್ತು. ಅದರ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಒತ್ತುವರಿ ಜಾಗ ತೆರವುಗೊಳಿಸಲು 2019ರ ಜು.18ರಂದು ಆದೇಶಿಸಿತ್ತು. ಅದರಂತೆ ಉಜಿರೆ ಪಿಡಿಒ ಸ್ಥಳಕ್ಕೆ ಭೇಟಿ ನೀಡಿದ್ದಾಗ ಹೈಕೋರ್ಟ್ ನ್ಯಾಯಮೂರ್ತಿಗಳ ಬಗ್ಗೆ ಮಹೇಶ್‌ ಶೆಟ್ಟಿ ತಿಮರೋಡಿ ನಿಂದನಾತ್ಮಕವಾಗಿ ಮಾತನಾಡಿದ್ದರು. ನ್ಯಾಯಾಲಯದ ಆದೇಶ ಪಾಲಿಸದ ಹಾಗೂ ನ್ಯಾಯಮೂರ್ತಿಗಳ ಕುರಿತು ನಿಂದನೆ ಮಾಡಿದ ಆರೋಪದಲ್ಲಿ ತಿಮರೋಡಿ ವಿರುದ್ದ ನ್ಯಾಯಾಂಗ ನಿಂದನೆ ದಾವೆ ಹೂಡಲಾಗಿದೆ.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya
error: Content is protected !!