25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಬೆಳ್ತಂಗಡಿ: ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರವರು ಮೃದು ಸ್ವಭಾವಿ, ಸಹೃದಯಿಯಾಗಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಯಕ್ಷಗಾನ ಮೇಳಕ್ಕೆ ಪುರಾಣ, ಐತಿಹಾಸಿಕ ಸೇರಿದಂತೆ 11 ಪ್ರಸಂಗಗಳನ್ನು ಬರೆದುಕೊಟ್ಟಿದ್ದರು. ಅವುಗಳ ಯಶಸ್ವಿ ಪ್ರಯೋಗಗಳು ನಡೆಯುತ್ತಿದ್ದವು. ತುಳುವಿನಲ್ಲಿ ಬರೆದ ಅವರ ಅನೇಕ ಹಾಡುಗಳು ಪ್ರಸಿದ್ಧವಾಗಿದ್ದವು. ಕೆಲವು ಹಾಡಿನ ತುಳು ಭಾಷಾಂತರ ಕೂಡ ಮಾಡಿದ್ದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡೆಮಿಯಿಂದ ಜಾನಪದ ತಜ್ಞ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿಯಿಂದ ಪಾರ್ತಿಸುಬ್ಬ ಪ್ರಶಸ್ತಿ ಹೀಗೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿ ಮೇರು ಸಾಹಿತಿಯಾಗಿದ್ದ ಅವರನ್ನು ಕಳೆದುಕೊಂಡದ್ದು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.


ಬದುಕಿನ ಪ್ರಯಾಣದ ನಡುವೆ ಅನಂತ ಸಾಧನೆಗೈದು ಜನಪ್ರಿಯರೂ ಬಹುಮಾನ್ಯರೂ ಆಗಿರುವರು. ಶ್ರೀ ಕ್ಷೇತ್ರ ಧರ್ಮಸ್ಥಳದ ಅಭಿಮಾನಿಗಳಾಗಿದ್ದು ನಿರಂತರ ಸಂಪರ್ಕದಲ್ಲಿದ್ದವರು.
ನಾಡು ಇಂದು ಅತ್ಯಂತ ಹಿರಿಯ ಹಾಗೂ ಮೇಧಾವಿ ಸಾಹಿತಿಯನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕುವಂತೆ ಭಗವಾನ್ ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಪ್ರಾರ್ಥಿಸಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!