30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

ಕುವೆಟ್ಟು:ಸ ಹಿ ಪ್ರಾ ಶಾಲೆ ಕುವೆಟ್ಟು ಇಲ್ಲಿ ಮಕ್ಕಳಲ್ಲಿ ಗಣಿತದ ಮೂಲ ಕ್ರಿಯೆಗಳ ಬಗ್ಗೆ ಅರಿವನ್ನು ಹೆಚ್ಚಿಸಲು ಮೆಟ್ರಿಕ್ ಮೇಳವನ್ನು ಜ 6 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ವಿವಿಧ ವಸ್ತುಗಳನ್ನು ತಂದು ಮಾರಾಟ ಮಾಡಿದರು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಗ್ರಾಹಕರಾಗಿ ವಸ್ತುಗಳನ್ನು ಖರೀದಿಸಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಶಾಲಾ ದಾನಿಗಳಾದ ಹಾಗೂ ಎಲ್ಲ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸುತ್ತಿರುವ ಹಿರಿಯ ವಿದ್ಯಾರ್ಥಿ ಮುರಳಿ ಶಾಲೆಯಲ್ಲಿ ಕಳೆದ ಬಾಲ್ಯದ ನೆನಪುಗಳನ್ನು ಹಂಚಿಕೊಳ್ಳುತ್ತಾ, ವಿದ್ಯಾರ್ಥಿಗಳಿಗೆ ಶಿಕ್ಷಣದ ಅಗತ್ಯತೆಯನ್ನು ತಿಳಿಸಿದರು. ಟಿಜಿಟಿ ಶಿಕ್ಷಕರಾದ ಸುರೇಶ್ ಶೆಟ್ಟಿ ಅವರು ಮೆಟ್ರಿಕ್ ಮೇಳದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಪ್ರೇಮ ಹಾಗೂ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರಾದ ಭಾಸ್ಕರ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya
error: Content is protected !!