25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

ಮೊಗ್ರು ಗ್ರಾಮದ ಮುಗೇರಡ್ಕ ದೈವಸ್ಥಾನ ಪಕ್ಕದಲ್ಲಿ ಹರಿಯುತ್ತಿರುವ ಪವಿತ್ರ ನದಿ ನೇತ್ರಾವತಿ ಕಿನಾರೆಯಲ್ಲಿ ಇರುವ ಮುಳುಗು ಸೇತುವೆ ಪ್ರತಿ ವರ್ಷದಂತೆ ಈ ವರ್ಷನು ಮಳೆ ನೀರಿಗೆ ಕೊಚ್ಚಿ ಹೋಗಿದ್ದು ಡಿಸೆಂಬರ್ ನಂತರ ಸೇತುವೆಯ ಸಂಪರ್ಕ ರಸ್ತೆಯನ್ನು ಸಾರ್ವಜನಿಕ ಸೇವೆಗೆ ಬಳಸಲು ಅನುಕೂಲವಾಗುವಂತೆ ಮಾಡಲು ಸರಕಾರದ ಯಾವುದೇ ಅನುದಾನ ಇಲ್ಲದೇ ಅಂದಾಜು ಸುಮಾರು 53000 ವೆಚ್ಚದಲ್ಲಿ ಮುಗೇರಡ್ಕ ದೈವಸ್ಥಾನ ವತಿಯಿಂದ ಈ ವರ್ಷನೂ ಈ ರಸ್ತೆಗೆ ಹಿಟಾಚಿ ಮೂಲಕ ರಸ್ತೆ ದುರಸ್ತಿ ಮಾಡಲಾಯಿತು.


ಸುಮಾರು 30 ವರ್ಷಗಳ ಹಿಂದೆ ಮುಗೇರಡ್ಕ ದೈವಸ್ಥಾನದ ಜಾತ್ರೋತ್ಸವ ಸಂದರ್ಭದಲ್ಲಿ ಅಕ್ಕಿಮುಡಿ, ಹರಾಜು ಹಾಕಿ, ಸ್ಥಳೀಯ ಗ್ರಾಮಸ್ತರ ದೇಣಿಗೆ ಪಡೆದು ಅಂದಿನ ಕಾಲದ ಅನುಕೂಲಕ್ಕೆ ತಕ್ಕಂತೆ ನಿರ್ಮಾಣ ಆದ ಮುಗೇರಡ್ಕ ಮುಳುಗು ಸೇತುವೆಯು ಪ್ರತಿ ಮಳೆಗಾಲದ ಪ್ರವಾಹದಲ್ಲಿ ಮುಳುಗಡೆ ಆಗಿ ಆ ಸೇತುವೆಯ ಮುಕ್ಕಾಲು ಭಾಗ ನೀರಲ್ಲಿ ಕೊಚ್ಚಿ ಹೋಗುವುದು ವಾಡಿಕೆ.

ಈ ಸೇತುವೆ ಡಿಸೆಂಬರ್ -ಜೂನ್ ತನಕ ಸಂಚಾರಕ್ಕೆ ತೆರೆದು ಮೊಗ್ರು, ಬಂದಾರು, ಕಣಿಯೂರು , ಇಳoತಿಲ ಗ್ರಾಮ ಹಾಗೂ ಉಜಿರೆ ಕಡೆಯಿಂದ ಬರುವ ಮತ್ತು ಉಜಿರೆ ಬೆಳ್ತಂಗಡಿ ಧರ್ಮಸ್ಥಳ ತನಕದ ಜನರಿಗೆ ಪುತ್ತೂರು ತಾಲೂಕು ಹಾದು ಹೋಗುವ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕ ಮಾಡಲು ಅನುಕೂಲವಾಗುತ್ತೆ. ಮಳೆಗಾಲ ಸಮಯದಲ್ಲಿ ನೀರಿನ ಸೆಳೆತಕ್ಕೆ ಸಿಕ್ಕಿ 50% ರಸ್ತೆ ನೀರಲ್ಲಿ ಕೊಚ್ಚಿ ಹೋಗಿ ಸಂಪರ್ಕ ಕಡಿತವಾಗುತ್ತೆ. ಈ ತಾತ್ಕಾಲಿಕ ಸೇತುವೆ ದಿನ ನಿತ್ಯ ಸಾವಿರಾರು ವಾಹನ ಓಡಾಟ ಇರುವ ಕಾರಣ ಪ್ರತಿ ವರ್ಷ ದೈವಸ್ಥಾನ ವತಿಯಿಂದ ರಿಪೇರಿ ಮಾಡುವ ಕಾರ್ಯ ಅನೇಕ ವರ್ಷಗಳಿಂದ ನಡೆದು ಬಂದಿರುತ್ತದೆ.

ಇದೇ ಜಾಗದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಇವರ ಪ್ರಯತ್ನದಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ ಇಲ್ಲಿಗೆ ಒಂದು ಬೃಹತ್ ಸೇತುವೆ ಸಹಿತ ಕಿಂಡಿ ಆಣೆಕಟ್ಟಿಗೆ ಅನುಮೋದನೆ ದೊರೆತು ಕಾಮಗಾರಿ ಆರಂಭವಾಗಿ ತುಂಬಾ ವೇಗದಿಂದ ಇದ್ದ ನಿರ್ಮಾಣಕಾರ್ಯ ನಡೆಯುತ್ತಿತ್ತು ,ಯಾಕೋ ಕೆಲವು ದಿನಗಳಿಂದ ನಿಧಾನವಾಗಿ ಸಾಗುತಿದ್ದು,ಇನ್ನೂ ಕೆಲವು ವರ್ಷ ಇದೇ ಹಳೆ ಸೇತುವೆ ಅವಲಂಬಿಸಬೇಕಾದ ಅನಿವಾರ್ಯತೆಯಲ್ಲಿ ಜನ ಸಾಮಾನ್ಯರು ಸರಕಾರದ ನಡೆಗೆ ಹಿಡಿ ಶಾಪ ಹಾಕುತಿದ್ದು,ಮುಗೇರಡ್ಕ ದೈವಸ್ಥಾನದ ವತಿಯಿಂದ ಪ್ರತಿ ವರ್ಷ ನಡೆಯುವ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೀಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಆದಷ್ಟು ಬೇಗ ಮುಗೇರಡ್ಕ ಸೇತುವೆ ಕಾಮಗಾರಿಗೆ ವೇಗ ಸಿಗಲಿ ಆದಷ್ಟು ಶೀಘ್ರದಲ್ಲಿ ಪ್ರಯಾಣಿಕರಿಗೆ ಸೇತುವೆಯು ಸಂಚಾರಕ್ಕೆ ಅನುಕೂಲವಾಗಲಿ ಎಂಬುದೇ ರಾಜ್ಯ ಸರ್ಕಾರಕ್ಕೆ ನಾಗರಿಕರ ಒಕ್ಕೊರಲ ಬೇಡಿಕೆಯಾಗಿದೆ.

Related posts

ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ: ನಿವೃತ್ತ ಜಯಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಅಂಡಿಂಜೆ : ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya
error: Content is protected !!