July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

ಮೊಗ್ರು :ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ, ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ಮುಂಭಾಗದ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಸುಮಾರು 2ಲಕ್ಷ ಮೀನುಮರಿಗಳ ಬಿತ್ತನೆ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಜ 6ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷ ಜಯಂತ ಕೋಟ್ಯಾನ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬಂದಾರು, ಮಂಗಳೂರು ಮೀನುಗಾರಿಕೆ ಜಂಟಿ ನಿರ್ದೇಶಕರಾದ ಸಿದ್ದಯ್ಯ, ಉಪನಿರ್ದೇಶಕರಾದ ಗುರುಚನ್ನಬಸಪ್ಪ ,ಪುತ್ತೂರು ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಮಂಜುಳಾ ಶೆಣೈ, ಮಾಜಿ ಅಧ್ಯಕ್ಷೆ ಹಾಲಿ ಸದಸ್ಯರಾದ ಪರಮೇಶ್ವರಿ ಕೆ ಗೌಡ, ಮಾಜಿ ಉಪಾಧ್ಯಕ್ಷರು ಹಾಲಿ ಸದಸ್ಯರಾದ ಗಂಗಾಧರ ಪೂಜಾರಿ, ಸದಸ್ಯರಾದ ಬಾಲಕೃಷ್ಣ ಗೌಡ, ಶಿವಣ್ಣ ಗೌಡ, ಪದ್ಮುಂಜ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ನಿರ್ದೇಶಕಿ ಶೀಲಾವತಿ ಬಾಬುಗೌಡ ಮುಗೇರಡ್ಕ, ಯುವ ಉದ್ಯಮಿ ದೇವಿಪ್ರಸಾದ್ ಗೌಡ ಕಡಮ್ಮಾಜೆ, ಮುಗೇರಡ್ಕ ಮೂವರು ದೈವಸ್ಥಾನದ ಆಡಳಿತ ಮೊಕ್ತೇಶರರಾದ ಮನೋಹರ ಗೌಡ ಅಂತರ, ಅಶೋಕ್ ಭಟ್ ಕಾನಿಸ್ಕ ಮೊಗ್ರು,ಕೃಷ್ಣಯ್ಯ ಆಚಾರ್ಯ,ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

Suddi Udaya

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya
error: Content is protected !!