September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

ಮೊಗ್ರು :ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ, ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ಮುಂಭಾಗದ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಸುಮಾರು 2ಲಕ್ಷ ಮೀನುಮರಿಗಳ ಬಿತ್ತನೆ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಜ 6ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷ ಜಯಂತ ಕೋಟ್ಯಾನ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬಂದಾರು, ಮಂಗಳೂರು ಮೀನುಗಾರಿಕೆ ಜಂಟಿ ನಿರ್ದೇಶಕರಾದ ಸಿದ್ದಯ್ಯ, ಉಪನಿರ್ದೇಶಕರಾದ ಗುರುಚನ್ನಬಸಪ್ಪ ,ಪುತ್ತೂರು ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಮಂಜುಳಾ ಶೆಣೈ, ಮಾಜಿ ಅಧ್ಯಕ್ಷೆ ಹಾಲಿ ಸದಸ್ಯರಾದ ಪರಮೇಶ್ವರಿ ಕೆ ಗೌಡ, ಮಾಜಿ ಉಪಾಧ್ಯಕ್ಷರು ಹಾಲಿ ಸದಸ್ಯರಾದ ಗಂಗಾಧರ ಪೂಜಾರಿ, ಸದಸ್ಯರಾದ ಬಾಲಕೃಷ್ಣ ಗೌಡ, ಶಿವಣ್ಣ ಗೌಡ, ಪದ್ಮುಂಜ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ನಿರ್ದೇಶಕಿ ಶೀಲಾವತಿ ಬಾಬುಗೌಡ ಮುಗೇರಡ್ಕ, ಯುವ ಉದ್ಯಮಿ ದೇವಿಪ್ರಸಾದ್ ಗೌಡ ಕಡಮ್ಮಾಜೆ, ಮುಗೇರಡ್ಕ ಮೂವರು ದೈವಸ್ಥಾನದ ಆಡಳಿತ ಮೊಕ್ತೇಶರರಾದ ಮನೋಹರ ಗೌಡ ಅಂತರ, ಅಶೋಕ್ ಭಟ್ ಕಾನಿಸ್ಕ ಮೊಗ್ರು,ಕೃಷ್ಣಯ್ಯ ಆಚಾರ್ಯ,ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

Suddi Udaya

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

Suddi Udaya
error: Content is protected !!