ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.5 ರಂದು ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಸತ್ಯವತಿ ಮತ್ತು ಶ್ರೀಮತಿ ಗಿರಿಜರವರು ಭಾಗವಹಿಸಿ ಮಕ್ಕಳನ್ನು ಹರಸಿ ಹಾರೈಸಿದರು.
ಸಾಂಸ್ಕೃತಿಕ ಬಹುಮಾನದ ಪಟ್ಟಿಯನ್ನು ಶ್ರೀಮತಿ ಸೀಮಾ, ಶ್ರೀಮತಿ ಪೂರ್ಣಿಮಾ ವಾಚಿಸಿದರು. ಕ್ರೀಡಾ ಬಹುಮಾನವನ್ನು ಸಂಜೀವ ಕೆ ವಾಚಿಸಿದರು.
ಅಧ್ಯಕ್ಷ ಸ್ಥಾನವನ್ನು ಮುಖ್ಯ ಶಿಕ್ಷಕ ಪಿ ಸುಬ್ರಹ್ಮಣ್ಯ ರಾವ್ ಮಕ್ಕಳನ್ನು ಉದ್ದೇಶಿಸಿ ಸ್ಪರ್ಧೆಯಲ್ಲಿ ಸೋಲು ಗೆಲುವು ಎರಡೂ ಇದೆ. ಸೋಲೇ ಗೆಲುವಿನ ಮೆಟ್ಟಿಲು. ಎರಡನ್ನೂ ಸಮಾನವಾಗಿ ಸ್ವೀಕರಿಸಿ ಯಶಸ್ಸನ್ನು ಗಳಿಸಿ ಎಂದು ಹೇಳಿದರು.


ಮಕ್ಕಳಿಂದ ಪ್ರಾರ್ಥನೆ, ಶ್ರೀಮತಿ ಕಾವ್ಯ ನಿರೂಪಿಸಿ, ಶ್ರೀಮತಿ ಕೇಶವತಿ ಧನ್ಯವಾದವಿತ್ತರು. ಎಲ್ಲಾ ಶಿಕ್ಷಕರು ಸಹಕರಿಸಿದರು.

Leave a Comment

error: Content is protected !!