25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.5 ರಂದು ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಸತ್ಯವತಿ ಮತ್ತು ಶ್ರೀಮತಿ ಗಿರಿಜರವರು ಭಾಗವಹಿಸಿ ಮಕ್ಕಳನ್ನು ಹರಸಿ ಹಾರೈಸಿದರು.
ಸಾಂಸ್ಕೃತಿಕ ಬಹುಮಾನದ ಪಟ್ಟಿಯನ್ನು ಶ್ರೀಮತಿ ಸೀಮಾ, ಶ್ರೀಮತಿ ಪೂರ್ಣಿಮಾ ವಾಚಿಸಿದರು. ಕ್ರೀಡಾ ಬಹುಮಾನವನ್ನು ಸಂಜೀವ ಕೆ ವಾಚಿಸಿದರು.
ಅಧ್ಯಕ್ಷ ಸ್ಥಾನವನ್ನು ಮುಖ್ಯ ಶಿಕ್ಷಕ ಪಿ ಸುಬ್ರಹ್ಮಣ್ಯ ರಾವ್ ಮಕ್ಕಳನ್ನು ಉದ್ದೇಶಿಸಿ ಸ್ಪರ್ಧೆಯಲ್ಲಿ ಸೋಲು ಗೆಲುವು ಎರಡೂ ಇದೆ. ಸೋಲೇ ಗೆಲುವಿನ ಮೆಟ್ಟಿಲು. ಎರಡನ್ನೂ ಸಮಾನವಾಗಿ ಸ್ವೀಕರಿಸಿ ಯಶಸ್ಸನ್ನು ಗಳಿಸಿ ಎಂದು ಹೇಳಿದರು.


ಮಕ್ಕಳಿಂದ ಪ್ರಾರ್ಥನೆ, ಶ್ರೀಮತಿ ಕಾವ್ಯ ನಿರೂಪಿಸಿ, ಶ್ರೀಮತಿ ಕೇಶವತಿ ಧನ್ಯವಾದವಿತ್ತರು. ಎಲ್ಲಾ ಶಿಕ್ಷಕರು ಸಹಕರಿಸಿದರು.

Related posts

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲಾ 2006ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!