23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

ಮುಂಡಾಜೆ : ಇಲ್ಲಿಯ 6ನೇ ವರ್ಷದ ಸಾಮೂಹಿಕ ನವಗ್ರಹ ಸಹಿತ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024 ಜ.06 ರಂದು ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಕೀರ್ತನಾ ಕಲಾ ತಂಡದ ಅಧ್ಯಕ್ಷ ಸದಾನಂದ ಬಿ. ಮುಂಡಾಜೆ ಪ್ರಾಸ್ತವಿಕವಾಗಿ ಮಾತನಾಡಿ ಕೀರ್ತನಾ ಕಲಾ ತಂಡವು ರಾಜ್ಯ ರಾಷ್ಟ ಮಟ್ಟದಲ್ಲಿ ತೊಡಗಿಸಿಕೊಂಡ ವಿಚಾರವನ್ನು ವ್ಯಕ್ತಪಡಿಸಿಕೊಂಡರು. ಗೌರವ ಉಪಸ್ಥಿತಿ ವಹಿಸಿದ್ದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಲಾ ಕ್ಷೇತ್ರ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಗೈದ ಸತ್ಯ ನಾರಾಯಣ ಭಟ್, ಬಾಬು ಪೂಜಾರಿ ಕೂಳೂರು, ಚಂದ್ರಶೇಖರ ಗೌಡ ಸಾಲ್ಪಿಲ, ಆನಂದ ನಲ್ಕೆ, ಕು. ಮೌಲ್ಯ ನಾಯಕ್, ಕು. ದಿವ್ಯಶ್ರೀ ಕೆ. ಶೆಟ್ಟಿ ಯವರಿಗೆ ಅಭಿನಂದಿಸಲಾಯಿತು.ಸಭೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಕೂಳೂರು, ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರರು ಕಜೆ ವೆಂಕಟೇಶ್ವರ ಭಟ್ ಉಪಸ್ಥಿತರಿದ್ದರು.

ಸಭೆಯ ಬಳಿಕ ಕೀರ್ತನಾ ಕಲಾ ತಂಡದಿಂದ ವಿದ್ಯುನ್ಮತಿ ಕಲ್ಯಾಣ ಯಕ್ಷಗಾನ ಪ್ರದರ್ಶನ ಹಾಗೂ ಕಲಾ ಕಲರವ ನಡೆಯಿತು.ನಾರಾಯಣ ಶೆಟ್ಟಿ ಪ್ರಾರ್ಥಿಸಿ, ಸದಾನಂದ ಬಿ. ಮುಂಡಾಜೆ ಸ್ವಾಗತಿಸಿದರು, ಕಾರ್ಯದರ್ಶಿ ಉಮೇಶ್ ಆಚಾರ್ ಧನ್ಯವಾದ ವಿತ್ತರು.

Related posts

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya
error: Content is protected !!