ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

ಗೇರುಕಟ್ಟೆ : ಕಳಿಯ ಗ್ರಾಮ ಬದಿನಡೆ ಸಮೀಪದ ಪುಂಡಿಕಲ್ ಕುಕ್ಕು ಅಶ್ವತಕಟ್ಟೆಯಲ್ಲಿ 15 ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಮಹಾ ಪೂಜೆ ಕುಂಟಿನಿ ರಾಘವೇಂದ್ರ ಭಾಂಗಿಣ್ಣಾಯರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಜ.6 ರಾತ್ರಿ ರಂದು ಜರಗಿತು.

ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಪ್ರಾಂಶುಪಾಲರಾದ ದಿವಾಕರ ಆಚಾರ್ಯ ಧಾರ್ಮಿಕ ಉಪನ್ಯಾಸ ನೀಡಿದರು. ಕೊಯ್ಯೂರು ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಆರ್ಚರಾದ ಅಶೋಕ್ ಕುಮಾರ್ ಭಾಂಗೀಣ್ಣಾಯರು ಹಾಗೂ ಕುಂಟಿನಿ ರಾಘವೇಂದ್ರ ಭಾಂಗೀಣ್ಣಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸ್ಥಳೀಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆ ಏರ್ಪಡಿಸಿದ್ದರು.ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

ಗೇರುಕಟ್ಟೆ ಮತ್ತು ಕುಂಟಿನಿ ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಕ್ತರು ಆಗಮಿಸಿದರು. ದಿವಂಗತ ಕುಂಟಿನಿ ನರಸಿಂಹಮೂರ್ತಿ ಭಾಂಗೀಣ್ಣಾಯ ಹಾಗೂ ದಿವಂಗತ ಉಮೇಶ್ ಪೂಜಾರಿ ಯವರ ಚಿರಸ್ಮರಣೆ ಮಾಡಿದರು. ಊರ,ಪರಊರ ಹವ್ಯಾಸಿ ಅತಿಥಿ ಕಲಾವಿದರಿಂದ ಅಭಿಮನ್ಯು-ಕರ್ಣಾರ್ಜುನ- ರಕ್ತರಾತ್ರಿ ಯಕ್ಷಗಾನ ಬಯಲಾಟ ಜರುಗಿತು.

ಸಿಂಚನ ಮತ್ತು ಚಿನ್ಮಯಿ ಪ್ರಾರ್ಥನೆ ಮಾಡಿದರು. ಗಮಕ ಜಿಲಾಧ್ಯಕ್ಷ ಮೋಹನ್ ಕಲ್ಲೂರಾಯ ಸ್ವಾಗತಿಸಿದರು. ಶ್ರೀಮತಿ ಸುವರ್ಣ ಕುಮಾರಿ ಕುಂಟಿನಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಶ್ರೀಮತಿ ಪದ್ಮಶ್ರೀ ಕುಂಟಿನಿ ವಂದಿಸಿದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾ ನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya
error: Content is protected !!