23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

ಗೇರುಕಟ್ಟೆ : ಕಳಿಯ ಗ್ರಾಮ ಬದಿನಡೆ ಸಮೀಪದ ಪುಂಡಿಕಲ್ ಕುಕ್ಕು ಅಶ್ವತಕಟ್ಟೆಯಲ್ಲಿ 15 ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಮಹಾ ಪೂಜೆ ಕುಂಟಿನಿ ರಾಘವೇಂದ್ರ ಭಾಂಗಿಣ್ಣಾಯರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಜ.6 ರಾತ್ರಿ ರಂದು ಜರಗಿತು.

ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಪ್ರಾಂಶುಪಾಲರಾದ ದಿವಾಕರ ಆಚಾರ್ಯ ಧಾರ್ಮಿಕ ಉಪನ್ಯಾಸ ನೀಡಿದರು. ಕೊಯ್ಯೂರು ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಆರ್ಚರಾದ ಅಶೋಕ್ ಕುಮಾರ್ ಭಾಂಗೀಣ್ಣಾಯರು ಹಾಗೂ ಕುಂಟಿನಿ ರಾಘವೇಂದ್ರ ಭಾಂಗೀಣ್ಣಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸ್ಥಳೀಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆ ಏರ್ಪಡಿಸಿದ್ದರು.ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

ಗೇರುಕಟ್ಟೆ ಮತ್ತು ಕುಂಟಿನಿ ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಕ್ತರು ಆಗಮಿಸಿದರು. ದಿವಂಗತ ಕುಂಟಿನಿ ನರಸಿಂಹಮೂರ್ತಿ ಭಾಂಗೀಣ್ಣಾಯ ಹಾಗೂ ದಿವಂಗತ ಉಮೇಶ್ ಪೂಜಾರಿ ಯವರ ಚಿರಸ್ಮರಣೆ ಮಾಡಿದರು. ಊರ,ಪರಊರ ಹವ್ಯಾಸಿ ಅತಿಥಿ ಕಲಾವಿದರಿಂದ ಅಭಿಮನ್ಯು-ಕರ್ಣಾರ್ಜುನ- ರಕ್ತರಾತ್ರಿ ಯಕ್ಷಗಾನ ಬಯಲಾಟ ಜರುಗಿತು.

ಸಿಂಚನ ಮತ್ತು ಚಿನ್ಮಯಿ ಪ್ರಾರ್ಥನೆ ಮಾಡಿದರು. ಗಮಕ ಜಿಲಾಧ್ಯಕ್ಷ ಮೋಹನ್ ಕಲ್ಲೂರಾಯ ಸ್ವಾಗತಿಸಿದರು. ಶ್ರೀಮತಿ ಸುವರ್ಣ ಕುಮಾರಿ ಕುಂಟಿನಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಶ್ರೀಮತಿ ಪದ್ಮಶ್ರೀ ಕುಂಟಿನಿ ವಂದಿಸಿದರು.

Related posts

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya
error: Content is protected !!