24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

ಮುಂಡಾಜೆ : ಇಲ್ಲಿಯ 6ನೇ ವರ್ಷದ ಸಾಮೂಹಿಕ ನವಗ್ರಹ ಸಹಿತ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024 ಜ.06 ರಂದು ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಕೀರ್ತನಾ ಕಲಾ ತಂಡದ ಅಧ್ಯಕ್ಷ ಸದಾನಂದ ಬಿ. ಮುಂಡಾಜೆ ಪ್ರಾಸ್ತವಿಕವಾಗಿ ಮಾತನಾಡಿ ಕೀರ್ತನಾ ಕಲಾ ತಂಡವು ರಾಜ್ಯ ರಾಷ್ಟ ಮಟ್ಟದಲ್ಲಿ ತೊಡಗಿಸಿಕೊಂಡ ವಿಚಾರವನ್ನು ವ್ಯಕ್ತಪಡಿಸಿಕೊಂಡರು. ಗೌರವ ಉಪಸ್ಥಿತಿ ವಹಿಸಿದ್ದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಲಾ ಕ್ಷೇತ್ರ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಗೈದ ಸತ್ಯ ನಾರಾಯಣ ಭಟ್, ಬಾಬು ಪೂಜಾರಿ ಕೂಳೂರು, ಚಂದ್ರಶೇಖರ ಗೌಡ ಸಾಲ್ಪಿಲ, ಆನಂದ ನಲ್ಕೆ, ಕು. ಮೌಲ್ಯ ನಾಯಕ್, ಕು. ದಿವ್ಯಶ್ರೀ ಕೆ. ಶೆಟ್ಟಿ ಯವರಿಗೆ ಅಭಿನಂದಿಸಲಾಯಿತು.ಸಭೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಕೂಳೂರು, ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರರು ಕಜೆ ವೆಂಕಟೇಶ್ವರ ಭಟ್ ಉಪಸ್ಥಿತರಿದ್ದರು.

ಸಭೆಯ ಬಳಿಕ ಕೀರ್ತನಾ ಕಲಾ ತಂಡದಿಂದ ವಿದ್ಯುನ್ಮತಿ ಕಲ್ಯಾಣ ಯಕ್ಷಗಾನ ಪ್ರದರ್ಶನ ಹಾಗೂ ಕಲಾ ಕಲರವ ನಡೆಯಿತು.ನಾರಾಯಣ ಶೆಟ್ಟಿ ಪ್ರಾರ್ಥಿಸಿ, ಸದಾನಂದ ಬಿ. ಮುಂಡಾಜೆ ಸ್ವಾಗತಿಸಿದರು, ಕಾರ್ಯದರ್ಶಿ ಉಮೇಶ್ ಆಚಾರ್ ಧನ್ಯವಾದ ವಿತ್ತರು.

Related posts

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya
error: Content is protected !!