22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

ಮುಂಡಾಜೆ : ಇಲ್ಲಿಯ 6ನೇ ವರ್ಷದ ಸಾಮೂಹಿಕ ನವಗ್ರಹ ಸಹಿತ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024 ಜ.06 ರಂದು ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಕೀರ್ತನಾ ಕಲಾ ತಂಡದ ಅಧ್ಯಕ್ಷ ಸದಾನಂದ ಬಿ. ಮುಂಡಾಜೆ ಪ್ರಾಸ್ತವಿಕವಾಗಿ ಮಾತನಾಡಿ ಕೀರ್ತನಾ ಕಲಾ ತಂಡವು ರಾಜ್ಯ ರಾಷ್ಟ ಮಟ್ಟದಲ್ಲಿ ತೊಡಗಿಸಿಕೊಂಡ ವಿಚಾರವನ್ನು ವ್ಯಕ್ತಪಡಿಸಿಕೊಂಡರು. ಗೌರವ ಉಪಸ್ಥಿತಿ ವಹಿಸಿದ್ದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಲಾ ಕ್ಷೇತ್ರ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಗೈದ ಸತ್ಯ ನಾರಾಯಣ ಭಟ್, ಬಾಬು ಪೂಜಾರಿ ಕೂಳೂರು, ಚಂದ್ರಶೇಖರ ಗೌಡ ಸಾಲ್ಪಿಲ, ಆನಂದ ನಲ್ಕೆ, ಕು. ಮೌಲ್ಯ ನಾಯಕ್, ಕು. ದಿವ್ಯಶ್ರೀ ಕೆ. ಶೆಟ್ಟಿ ಯವರಿಗೆ ಅಭಿನಂದಿಸಲಾಯಿತು.ಸಭೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಕೂಳೂರು, ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರರು ಕಜೆ ವೆಂಕಟೇಶ್ವರ ಭಟ್ ಉಪಸ್ಥಿತರಿದ್ದರು.

ಸಭೆಯ ಬಳಿಕ ಕೀರ್ತನಾ ಕಲಾ ತಂಡದಿಂದ ವಿದ್ಯುನ್ಮತಿ ಕಲ್ಯಾಣ ಯಕ್ಷಗಾನ ಪ್ರದರ್ಶನ ಹಾಗೂ ಕಲಾ ಕಲರವ ನಡೆಯಿತು.ನಾರಾಯಣ ಶೆಟ್ಟಿ ಪ್ರಾರ್ಥಿಸಿ, ಸದಾನಂದ ಬಿ. ಮುಂಡಾಜೆ ಸ್ವಾಗತಿಸಿದರು, ಕಾರ್ಯದರ್ಶಿ ಉಮೇಶ್ ಆಚಾರ್ ಧನ್ಯವಾದ ವಿತ್ತರು.

Related posts

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya
error: Content is protected !!