23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

ಮುಂಡಾಜೆ : ಇಲ್ಲಿಯ 6ನೇ ವರ್ಷದ ಸಾಮೂಹಿಕ ನವಗ್ರಹ ಸಹಿತ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024 ಜ.06 ರಂದು ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಕೀರ್ತನಾ ಕಲಾ ತಂಡದ ಅಧ್ಯಕ್ಷ ಸದಾನಂದ ಬಿ. ಮುಂಡಾಜೆ ಪ್ರಾಸ್ತವಿಕವಾಗಿ ಮಾತನಾಡಿ ಕೀರ್ತನಾ ಕಲಾ ತಂಡವು ರಾಜ್ಯ ರಾಷ್ಟ ಮಟ್ಟದಲ್ಲಿ ತೊಡಗಿಸಿಕೊಂಡ ವಿಚಾರವನ್ನು ವ್ಯಕ್ತಪಡಿಸಿಕೊಂಡರು. ಗೌರವ ಉಪಸ್ಥಿತಿ ವಹಿಸಿದ್ದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಲಾ ಕ್ಷೇತ್ರ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಗೈದ ಸತ್ಯ ನಾರಾಯಣ ಭಟ್, ಬಾಬು ಪೂಜಾರಿ ಕೂಳೂರು, ಚಂದ್ರಶೇಖರ ಗೌಡ ಸಾಲ್ಪಿಲ, ಆನಂದ ನಲ್ಕೆ, ಕು. ಮೌಲ್ಯ ನಾಯಕ್, ಕು. ದಿವ್ಯಶ್ರೀ ಕೆ. ಶೆಟ್ಟಿ ಯವರಿಗೆ ಅಭಿನಂದಿಸಲಾಯಿತು.ಸಭೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಕೂಳೂರು, ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರರು ಕಜೆ ವೆಂಕಟೇಶ್ವರ ಭಟ್ ಉಪಸ್ಥಿತರಿದ್ದರು.

ಸಭೆಯ ಬಳಿಕ ಕೀರ್ತನಾ ಕಲಾ ತಂಡದಿಂದ ವಿದ್ಯುನ್ಮತಿ ಕಲ್ಯಾಣ ಯಕ್ಷಗಾನ ಪ್ರದರ್ಶನ ಹಾಗೂ ಕಲಾ ಕಲರವ ನಡೆಯಿತು.ನಾರಾಯಣ ಶೆಟ್ಟಿ ಪ್ರಾರ್ಥಿಸಿ, ಸದಾನಂದ ಬಿ. ಮುಂಡಾಜೆ ಸ್ವಾಗತಿಸಿದರು, ಕಾರ್ಯದರ್ಶಿ ಉಮೇಶ್ ಆಚಾರ್ ಧನ್ಯವಾದ ವಿತ್ತರು.

Related posts

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!