April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

ಗೇರುಕಟ್ಟೆ : ಕಳಿಯ ಗ್ರಾಮ ಬದಿನಡೆ ಸಮೀಪದ ಪುಂಡಿಕಲ್ ಕುಕ್ಕು ಅಶ್ವತಕಟ್ಟೆಯಲ್ಲಿ 15 ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಮಹಾ ಪೂಜೆ ಕುಂಟಿನಿ ರಾಘವೇಂದ್ರ ಭಾಂಗಿಣ್ಣಾಯರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಜ.6 ರಾತ್ರಿ ರಂದು ಜರಗಿತು.

ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಪ್ರಾಂಶುಪಾಲರಾದ ದಿವಾಕರ ಆಚಾರ್ಯ ಧಾರ್ಮಿಕ ಉಪನ್ಯಾಸ ನೀಡಿದರು. ಕೊಯ್ಯೂರು ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಆರ್ಚರಾದ ಅಶೋಕ್ ಕುಮಾರ್ ಭಾಂಗೀಣ್ಣಾಯರು ಹಾಗೂ ಕುಂಟಿನಿ ರಾಘವೇಂದ್ರ ಭಾಂಗೀಣ್ಣಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸ್ಥಳೀಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆ ಏರ್ಪಡಿಸಿದ್ದರು.ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

ಗೇರುಕಟ್ಟೆ ಮತ್ತು ಕುಂಟಿನಿ ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಕ್ತರು ಆಗಮಿಸಿದರು. ದಿವಂಗತ ಕುಂಟಿನಿ ನರಸಿಂಹಮೂರ್ತಿ ಭಾಂಗೀಣ್ಣಾಯ ಹಾಗೂ ದಿವಂಗತ ಉಮೇಶ್ ಪೂಜಾರಿ ಯವರ ಚಿರಸ್ಮರಣೆ ಮಾಡಿದರು. ಊರ,ಪರಊರ ಹವ್ಯಾಸಿ ಅತಿಥಿ ಕಲಾವಿದರಿಂದ ಅಭಿಮನ್ಯು-ಕರ್ಣಾರ್ಜುನ- ರಕ್ತರಾತ್ರಿ ಯಕ್ಷಗಾನ ಬಯಲಾಟ ಜರುಗಿತು.

ಸಿಂಚನ ಮತ್ತು ಚಿನ್ಮಯಿ ಪ್ರಾರ್ಥನೆ ಮಾಡಿದರು. ಗಮಕ ಜಿಲಾಧ್ಯಕ್ಷ ಮೋಹನ್ ಕಲ್ಲೂರಾಯ ಸ್ವಾಗತಿಸಿದರು. ಶ್ರೀಮತಿ ಸುವರ್ಣ ಕುಮಾರಿ ಕುಂಟಿನಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಶ್ರೀಮತಿ ಪದ್ಮಶ್ರೀ ಕುಂಟಿನಿ ವಂದಿಸಿದರು.

Related posts

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya
error: Content is protected !!