24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

ಗೇರುಕಟ್ಟೆ : ಕಳಿಯ ಗ್ರಾಮ ಬದಿನಡೆ ಸಮೀಪದ ಪುಂಡಿಕಲ್ ಕುಕ್ಕು ಅಶ್ವತಕಟ್ಟೆಯಲ್ಲಿ 15 ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಮಹಾ ಪೂಜೆ ಕುಂಟಿನಿ ರಾಘವೇಂದ್ರ ಭಾಂಗಿಣ್ಣಾಯರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಜ.6 ರಾತ್ರಿ ರಂದು ಜರಗಿತು.

ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಪ್ರಾಂಶುಪಾಲರಾದ ದಿವಾಕರ ಆಚಾರ್ಯ ಧಾರ್ಮಿಕ ಉಪನ್ಯಾಸ ನೀಡಿದರು. ಕೊಯ್ಯೂರು ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಆರ್ಚರಾದ ಅಶೋಕ್ ಕುಮಾರ್ ಭಾಂಗೀಣ್ಣಾಯರು ಹಾಗೂ ಕುಂಟಿನಿ ರಾಘವೇಂದ್ರ ಭಾಂಗೀಣ್ಣಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸ್ಥಳೀಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆ ಏರ್ಪಡಿಸಿದ್ದರು.ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

ಗೇರುಕಟ್ಟೆ ಮತ್ತು ಕುಂಟಿನಿ ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಕ್ತರು ಆಗಮಿಸಿದರು. ದಿವಂಗತ ಕುಂಟಿನಿ ನರಸಿಂಹಮೂರ್ತಿ ಭಾಂಗೀಣ್ಣಾಯ ಹಾಗೂ ದಿವಂಗತ ಉಮೇಶ್ ಪೂಜಾರಿ ಯವರ ಚಿರಸ್ಮರಣೆ ಮಾಡಿದರು. ಊರ,ಪರಊರ ಹವ್ಯಾಸಿ ಅತಿಥಿ ಕಲಾವಿದರಿಂದ ಅಭಿಮನ್ಯು-ಕರ್ಣಾರ್ಜುನ- ರಕ್ತರಾತ್ರಿ ಯಕ್ಷಗಾನ ಬಯಲಾಟ ಜರುಗಿತು.

ಸಿಂಚನ ಮತ್ತು ಚಿನ್ಮಯಿ ಪ್ರಾರ್ಥನೆ ಮಾಡಿದರು. ಗಮಕ ಜಿಲಾಧ್ಯಕ್ಷ ಮೋಹನ್ ಕಲ್ಲೂರಾಯ ಸ್ವಾಗತಿಸಿದರು. ಶ್ರೀಮತಿ ಸುವರ್ಣ ಕುಮಾರಿ ಕುಂಟಿನಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಶ್ರೀಮತಿ ಪದ್ಮಶ್ರೀ ಕುಂಟಿನಿ ವಂದಿಸಿದರು.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!