25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

ಗೇರುಕಟ್ಟೆ : ಕಳಿಯ ಗ್ರಾಮ ಬದಿನಡೆ ಸಮೀಪದ ಪುಂಡಿಕಲ್ ಕುಕ್ಕು ಅಶ್ವತಕಟ್ಟೆಯಲ್ಲಿ 15 ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಮಹಾ ಪೂಜೆ ಕುಂಟಿನಿ ರಾಘವೇಂದ್ರ ಭಾಂಗಿಣ್ಣಾಯರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಜ.6 ರಾತ್ರಿ ರಂದು ಜರಗಿತು.

ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಪ್ರಾಂಶುಪಾಲರಾದ ದಿವಾಕರ ಆಚಾರ್ಯ ಧಾರ್ಮಿಕ ಉಪನ್ಯಾಸ ನೀಡಿದರು. ಕೊಯ್ಯೂರು ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಆರ್ಚರಾದ ಅಶೋಕ್ ಕುಮಾರ್ ಭಾಂಗೀಣ್ಣಾಯರು ಹಾಗೂ ಕುಂಟಿನಿ ರಾಘವೇಂದ್ರ ಭಾಂಗೀಣ್ಣಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸ್ಥಳೀಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆ ಏರ್ಪಡಿಸಿದ್ದರು.ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

ಗೇರುಕಟ್ಟೆ ಮತ್ತು ಕುಂಟಿನಿ ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಕ್ತರು ಆಗಮಿಸಿದರು. ದಿವಂಗತ ಕುಂಟಿನಿ ನರಸಿಂಹಮೂರ್ತಿ ಭಾಂಗೀಣ್ಣಾಯ ಹಾಗೂ ದಿವಂಗತ ಉಮೇಶ್ ಪೂಜಾರಿ ಯವರ ಚಿರಸ್ಮರಣೆ ಮಾಡಿದರು. ಊರ,ಪರಊರ ಹವ್ಯಾಸಿ ಅತಿಥಿ ಕಲಾವಿದರಿಂದ ಅಭಿಮನ್ಯು-ಕರ್ಣಾರ್ಜುನ- ರಕ್ತರಾತ್ರಿ ಯಕ್ಷಗಾನ ಬಯಲಾಟ ಜರುಗಿತು.

ಸಿಂಚನ ಮತ್ತು ಚಿನ್ಮಯಿ ಪ್ರಾರ್ಥನೆ ಮಾಡಿದರು. ಗಮಕ ಜಿಲಾಧ್ಯಕ್ಷ ಮೋಹನ್ ಕಲ್ಲೂರಾಯ ಸ್ವಾಗತಿಸಿದರು. ಶ್ರೀಮತಿ ಸುವರ್ಣ ಕುಮಾರಿ ಕುಂಟಿನಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಶ್ರೀಮತಿ ಪದ್ಮಶ್ರೀ ಕುಂಟಿನಿ ವಂದಿಸಿದರು.

Related posts

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಬೆಳ್ತಂಗಡಿ: ಮಠದಬೈಲು ಕಾಲು ಸಂಕ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಸೌತಡ್ಕ ಅಂಗನವಾಡಿಯಲ್ಲಿ ಆಟಿಕೆಗಳ ಮಧ್ಯೆ ಅಡಗಿದ್ದ ಹಾವು ಕಚ್ಚಿ 4 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲು

Suddi Udaya

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಕಾರು

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya
error: Content is protected !!