24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

ಮುಂಡಾಜೆ : ಇಲ್ಲಿಯ 6ನೇ ವರ್ಷದ ಸಾಮೂಹಿಕ ನವಗ್ರಹ ಸಹಿತ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024 ಜ.06 ರಂದು ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಕೀರ್ತನಾ ಕಲಾ ತಂಡದ ಅಧ್ಯಕ್ಷ ಸದಾನಂದ ಬಿ. ಮುಂಡಾಜೆ ಪ್ರಾಸ್ತವಿಕವಾಗಿ ಮಾತನಾಡಿ ಕೀರ್ತನಾ ಕಲಾ ತಂಡವು ರಾಜ್ಯ ರಾಷ್ಟ ಮಟ್ಟದಲ್ಲಿ ತೊಡಗಿಸಿಕೊಂಡ ವಿಚಾರವನ್ನು ವ್ಯಕ್ತಪಡಿಸಿಕೊಂಡರು. ಗೌರವ ಉಪಸ್ಥಿತಿ ವಹಿಸಿದ್ದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಲಾ ಕ್ಷೇತ್ರ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಗೈದ ಸತ್ಯ ನಾರಾಯಣ ಭಟ್, ಬಾಬು ಪೂಜಾರಿ ಕೂಳೂರು, ಚಂದ್ರಶೇಖರ ಗೌಡ ಸಾಲ್ಪಿಲ, ಆನಂದ ನಲ್ಕೆ, ಕು. ಮೌಲ್ಯ ನಾಯಕ್, ಕು. ದಿವ್ಯಶ್ರೀ ಕೆ. ಶೆಟ್ಟಿ ಯವರಿಗೆ ಅಭಿನಂದಿಸಲಾಯಿತು.ಸಭೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಕೂಳೂರು, ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರರು ಕಜೆ ವೆಂಕಟೇಶ್ವರ ಭಟ್ ಉಪಸ್ಥಿತರಿದ್ದರು.

ಸಭೆಯ ಬಳಿಕ ಕೀರ್ತನಾ ಕಲಾ ತಂಡದಿಂದ ವಿದ್ಯುನ್ಮತಿ ಕಲ್ಯಾಣ ಯಕ್ಷಗಾನ ಪ್ರದರ್ಶನ ಹಾಗೂ ಕಲಾ ಕಲರವ ನಡೆಯಿತು.ನಾರಾಯಣ ಶೆಟ್ಟಿ ಪ್ರಾರ್ಥಿಸಿ, ಸದಾನಂದ ಬಿ. ಮುಂಡಾಜೆ ಸ್ವಾಗತಿಸಿದರು, ಕಾರ್ಯದರ್ಶಿ ಉಮೇಶ್ ಆಚಾರ್ ಧನ್ಯವಾದ ವಿತ್ತರು.

Related posts

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

Suddi Udaya
error: Content is protected !!