37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

ಕೊಕ್ಕಡ: ಸಾವು ಬದುಕಿನ ಮಧ್ಯೆ ಹೋರಾಟ ನಡೆಸುವವರನ್ನು ಬದುಕಿಸಲು ರಕ್ತದಾನ ಮಾಡುವುದು ಸಮಾಜಮುಖಿ ಕಾರ್ಯಗಳಲ್ಲಿ ಒಂದು. ರಕ್ತದಾನ ಮಹಾದಾನ, ಒಂದು ಹನಿರಕ್ತ ಅಮೂಲ್ಯ ಜೀವದ ಉಳಿಯುವಿಕೆಗೆ ನೆರವಾಗಲಿದೆ. ರಕ್ತದಾನ ಮಾಡಬೇಕಾದರೆ ಗಂಡು ಹೆಣ್ಣು ಭೇದವಿಲ್ಲದೆ ರಕ್ತದಾನ ಮಾಡಬಹುದು. ರಕ್ತದಾನ ಮಾಡುವುದರಿಂದ ನಮ್ಮ ದೇಹದಲ್ಲಿ ಹೊಸ ರಕ್ತದ ಸಂಚಲನವಾಗುತ್ತದೆ. ಅದರೊಂದಿಗೆ ಉತ್ತಮ ಆರೋಗ್ಯವಂತರಾಗಿದ್ದು ಧೈರ್ಯವಂತರಾಗಿರಬೇಕೆಂದು ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತುಷಾರ ಕುಮಾರಿ ಹೇಳಿದರು.

ಇವರು ಇನ್ಸಸೈರ್ ಸ್ಪೋರ್ಟ್ಸ್ ಕ್ಲಬ್ ಕೊಕ್ಕಡ, ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ, ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಜ.7 ರಂದು ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ಅಧ್ಯಕ್ಷತೆಯನ್ನು ಇನ್ಸಸೈರ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಮುನೀರ್ ಎಂ.ಎಚ್., ವಹಿಸಿದರು. ವೇದಿಕೆಯಲ್ಲಿ ಬದ್ರಿಯಾ ಜುಮಾ ಮಸೀದಿಯ ಖತೀಬ್ ಅಬ್ದುಲ್ ಸಮ್ಮದ್ ಬಖಾವಿ, ಕೊಕ್ಕಡ ಬದ್ರಿಯ ಜುಮಾ ಮಸೀದಿಯ ಅಧ್ಯಕ್ಷರಾದ ಹೈದರ್ ಎಂ. ಎಸ್., ಮಂಗಳೂರು ವೆನ್ಲಾಕ್ ಆಸ್ಪತ್ರೆ ಬ್ಲಡ್ ಬ್ಯಾಂಕ್ ನ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಉಪಸ್ಥಿತರಿದ್ದರು.

ಜುಬೇರ್ ಕೊಕ್ಕಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಅನ್ಸರ್ ಕೊಕ್ಕಡ ವಂದಿಸಿದರು.
ಸುಮಾರು 30 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related posts

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!