ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

ಕೊಕ್ಕಡ: ಸಾವು ಬದುಕಿನ ಮಧ್ಯೆ ಹೋರಾಟ ನಡೆಸುವವರನ್ನು ಬದುಕಿಸಲು ರಕ್ತದಾನ ಮಾಡುವುದು ಸಮಾಜಮುಖಿ ಕಾರ್ಯಗಳಲ್ಲಿ ಒಂದು. ರಕ್ತದಾನ ಮಹಾದಾನ, ಒಂದು ಹನಿರಕ್ತ ಅಮೂಲ್ಯ ಜೀವದ ಉಳಿಯುವಿಕೆಗೆ ನೆರವಾಗಲಿದೆ. ರಕ್ತದಾನ ಮಾಡಬೇಕಾದರೆ ಗಂಡು ಹೆಣ್ಣು ಭೇದವಿಲ್ಲದೆ ರಕ್ತದಾನ ಮಾಡಬಹುದು. ರಕ್ತದಾನ ಮಾಡುವುದರಿಂದ ನಮ್ಮ ದೇಹದಲ್ಲಿ ಹೊಸ ರಕ್ತದ ಸಂಚಲನವಾಗುತ್ತದೆ. ಅದರೊಂದಿಗೆ ಉತ್ತಮ ಆರೋಗ್ಯವಂತರಾಗಿದ್ದು ಧೈರ್ಯವಂತರಾಗಿರಬೇಕೆಂದು ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತುಷಾರ ಕುಮಾರಿ ಹೇಳಿದರು.

ಇವರು ಇನ್ಸಸೈರ್ ಸ್ಪೋರ್ಟ್ಸ್ ಕ್ಲಬ್ ಕೊಕ್ಕಡ, ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ, ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಜ.7 ರಂದು ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ಅಧ್ಯಕ್ಷತೆಯನ್ನು ಇನ್ಸಸೈರ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಮುನೀರ್ ಎಂ.ಎಚ್., ವಹಿಸಿದರು. ವೇದಿಕೆಯಲ್ಲಿ ಬದ್ರಿಯಾ ಜುಮಾ ಮಸೀದಿಯ ಖತೀಬ್ ಅಬ್ದುಲ್ ಸಮ್ಮದ್ ಬಖಾವಿ, ಕೊಕ್ಕಡ ಬದ್ರಿಯ ಜುಮಾ ಮಸೀದಿಯ ಅಧ್ಯಕ್ಷರಾದ ಹೈದರ್ ಎಂ. ಎಸ್., ಮಂಗಳೂರು ವೆನ್ಲಾಕ್ ಆಸ್ಪತ್ರೆ ಬ್ಲಡ್ ಬ್ಯಾಂಕ್ ನ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಉಪಸ್ಥಿತರಿದ್ದರು.

ಜುಬೇರ್ ಕೊಕ್ಕಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಅನ್ಸರ್ ಕೊಕ್ಕಡ ವಂದಿಸಿದರು.
ಸುಮಾರು 30 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related posts

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya
error: Content is protected !!