25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

ಬಳಂಜ: ಪ್ರಗತಿ ಬಂಧು‌ ಸ್ವಸಹಾಯ ಸಂಘಗಳ‌ ಒಕ್ಕೂಟ ನಾಲ್ಕೂರು ಎ.ಬಿ,ಜನಜಾಗೃತಿ ಗ್ರಾಮ ಸಮಿತಿ‌ ನಾಲ್ಕೂರು ಇದರ ವತಿಯಿಂದ ಒಕ್ಕೂಟದ ಪದಪ್ರದಾನ ಸಮಾರಂಭವು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜ7 ರಂದು ನಡೆಯಿತು.

ಪದಪ್ರದಾನ ಸಮಾರಂಭದ ಉದ್ಘಾಟನೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ಕಾಪಿನಡ್ಕ ನೆರವೇರಿಸಿ ಶುಭ ಕೋರಿದರು.

ವೇದಿಕೆಯಲ್ಲಿ ಬಳಂಜ ಗ್ರಾಮ‌ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಜನಜಾಗೃತಿ ತಾಲೂಕು ಸಮಿತಿ‌ ಸದಸ್ಯ ವಿಶ್ವನಾಥ ಹೊಳ್ಳ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಪ್ರಗತಿಪರ ಕೃಷಿಕ ಪ್ರಮೋದ್ ಕುಮಾರ್ ಜೈನ್ ಸಿದ್ದರಹಿತ್ಲು ,ಆಂತರಿಕ ಲೆಕ್ಕಪರಿಶೋಧಕರಾದ ಲಲಿತಾ, ನಾಲ್ಕೂರು ಎ ಒಕ್ಕೂಟದ ಅಧ್ಯಕ್ಷ ಪ್ರಮೋದ್ ಪೂಜಾರಿ, ನಾಲ್ಕೂರು ರಾಮನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಸಂತ ಶೆಟ್ಟಿ, ಯೋಜನಾ ಕಚೇರಿಯ ಕೃಷಿ ಮೇಲ್ವಿಚಾರಕ ಕೃಷ್ಣ, ಎಬಿ ಒಕ್ಕೂಟದ ನೂತನ‌ ಅಧ್ಯಕ್ಷರಾದ ಹರೀಶ್ ಪೂಜಾರಿ, ಲಲಿತಾ, ಕಾರ್ಯದರ್ಶಿಗಳಾದ ಚಂದ್ರಾವತಿ, ಸವಿತಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನವಜೀವನ ಸಮಿತಿ ಸದಸ್ಯರಾದ ಬೇಬಿ ಪರವ ನಾಲ್ಕೂರು, ವಾಸು ಪೂಜಾರಿ ಬಾರ್ದೋಟ್ಟು, ಸಂಜೀವ ಪೂಜಾರಿ ಬಾರ್ದೋಟ್ಟು, ನೋಣಯ್ಯ ಶೆಟ್ಟಿ ಕುರೆಲ್ಯ, ನಾರಾಯಣ ಪೂಜಾರಿ ಸೂಳಬೆಟ್ಟು ಹಾಗೂ ಹಿರಿಯ ಸದಸ್ಯರಾದ ಚಂದ್ರಾವತಿ ರಾಮನಗರ, ಅಪ್ಪಿ ಖಂಡಿಗ ಇವರನ್ನು ಸನ್ಮಾನಿಸಲಾಯಿತು.

ಪುಷ್ಪಾ ಗೀರೀಶ್ ಪ್ರಾರ್ಥಿಸಿ, ಭಾರತಿ ಸ್ವಾಗತಿಸಿ, ಸವಿತಾ ಅಶೋಕ್ ವರದಿ‌ ಮಂಡಿಸಿದರು. ಅಶೋಕ್ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ಸೇವಾ ಪ್ರತಿನಿಧಿ ಸರಸ್ವತಿ ವಂದಿಸಿದರು.

ತೆಂಗಿನ ಗರಿಯಿಂದ ವೇದಿಕೆಯನ್ನು ಅಲಂಕರಿಸಿದ್ದು ಎಲ್ಲರ ಗಮನ ಸೆಳೆಯಿತು ಹಾಗೂ ಯೋಜನೆಯ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!