April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023-24 ನೇ ಸಾಲಿನ ನೂತನ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭವು ಬೆಳ್ತಂಗಡಿ ಜೆಸಿ ಭವನದಲ್ಲಿ ಜ7 ರಂದು ನಡೆಯಿತು.

ಕಳೆದ ಸಾಲಿನ ಅಧ್ಯಕ್ಷ ಶಂಕರ್ ರಾವ್ ನೂತನ ಅಧ್ಯಕ್ಷ ರಂಜಿತ್ ಹೆಚ್.ಡಿ ಅವರಿಗೆ ಅಧಿಕಾರ ಹಸ್ತಾಂತರಿಸಿ ಮುಂದಿನ ವರ್ಷದ ಕಾರ್ಯಕ್ರಮಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಜೆಸಿಐ ಭಾರತದ ಪೂರ್ವ ರಾಷ್ಟ್ರೀಯ ನಿರ್ದೇಶಕ ಸಂಪತ್ ಬಿ ಸುವರ್ಣ, ವಲಯ ಉಪಾಧ್ಯಕ್ಷ ಶಂಕರ್ ರಾವ್, ಉಪಸ್ಥಿತರಿದ್ದರು.

ಕಳೆದ ಬಾರಿಯ ಕಾರ್ಯದರ್ಶಿ ಸುಧೀರ್ ಕೆ.ಎನ್ ನೂತನ‌ ಕಾರ್ಯದರ್ಶಿ ಅನುದೀಪ್ ಜೈನ್,ಲೇಡಿ ಜೇಸಿ ಸಂಯೋಜಕಿ ಮಮಿತಾರವರು ಶ್ರತಿ ರಂಜಿತ್ ಅವರಿಗೆ, ಜೂನಿಯರ್ ಜೆಸಿ ಅಧ್ಯಕ್ಷ ರಾಮಕೃಷ್ಣ ಶರ್ಮ ಅವರು ಸಮನ್ವಿತ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಘಟಕದ ವತಿಯಿಂದ ವಲಯ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಶಂಕರ್ ರಾವ್ ಹಾಗೂ ವಲಯಾಧ್ಯಕ್ಷ ಗಿರೀಶ್ ಎಸ್.ಪಿ ಅವರನ್ನು ಸನ್ಮಾನಿಸಲಾಯಿತು.

ಜೆಸಿಐ ಬೆಳ್ತಂಗಡಿ ಘಟಕಕ್ಕೆ ಸುಮಾರು 14 ಸದಸ್ಯರು ಸೇರ್ಪಡೆಯಾದರು.

ಪೂರ್ವಾಧ್ಯಕ್ಷ ಚಿದಾನಂದ ಇಡ್ಯ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.ಪೂರ್ವಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ನೂತನ ಅಧ್ಯಕ್ಷರನ್ನು ಸಭೆಗೆ ಪರಿಚಯಿಸಿದರು. ಅರೋಲಿನ್ ಜೆಸಿ ವಾಣಿ ಉದ್ಘೋಷಿಸಿದರು.ಶಂಕರ್ ರಾವ್ ಸ್ವಾಗತಸಿದರು, ಅತಿಥಿಗಳನ್ನು ಪ್ರೀತಮ್ ಶೆಟ್ಟಿ, ಶೈಲೇಶ್,ರಕ್ಷಿತಾ ಶೆಟ್ಟಿ,ಸುದೀರ್ ಕೆ.ಎನ್,ಆಶಾಲತಾ ಪರಿಚಯಿಸಿದರು. ಕಾರ್ಯದರ್ಶಿ ಅನುದೀಪ್ ಜೈನ್ ವಂದಿಸಿದರು.

ಘಟಕದ ಪೂರ್ವಾಧ್ಯಕ್ಷರುಗಳು, ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಹಕರಿಸಿದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya
error: Content is protected !!