ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮವು ಜ.7ರಂದು ನಡೆಯಿತು.

ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಕಾರ್‍ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ನಾರಾಯಣ ಮೂಲ್ಯ ಓಡೀಲು, ಸಂಪನ್ಮೂಲ ವ್ಯಕ್ತಿ ನಾಗೇಶ್ ಬಿ ನೆರಿಯ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯ ಅಧ್ಯಕ್ಷ ಸಂದೇಶ್‌ ಅನಿಲ ಹಾಗೂ ಯುವ ಸಮಿತಿಯ ಅಧ್ಯಕ್ಷ ಅಶ್ವಿತ್ ಓಡೀಲು, ಭಜನಾ ಸದಸ್ಯರು, ಪೋಷಕರು ಮುಂತಾದವರು ಉಪಸ್ಥಿತರಿದ್ದರು.

Leave a Comment

error: Content is protected !!