30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಹಾಸನದಲ್ಲಿ ನಡೆದಂತಹ ಮುಕ್ತ ರಾಷ್ಟ್ರೀಯ ಕರಾಟೆ ಪಂದ್ಯಕೂಟದಲ್ಲಿ ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ ವಿಧ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಮುಡಿಗೆರೆಸಿಕೊಂಡಿದ್ದಾರೆ.

ಕಲರ್ ಬೆಲ್ಟ್ ವಿಭಾಗದಲ್ಲಿ ಮೊಹಮ್ಮದ್ ರಯ್ಯಾನ್ ಮತ್ತು ನಿಶಾನ್ ಕಟಾ ಹಾಗೂ ಫೈಟಿಂಗ್ ನಲ್ಲಿ ಚಿನ್ನ, ಆಡ್ಲಿನ್ ಎಲಿಜಬೆತ್ ಜೆರಿನ್ ಫೈಟಿಂಗ್ ನಲ್ಲಿ ಚಿನ್ನ ಮತ್ತು ಕಟಾದಲ್ಲಿ ಕಂಚು, ವಿಶ್ವಾಸ್ ಶೆಟ್ಟಿ ಕಟಾದಲ್ಲಿ ಬೆಳ್ಳಿ, ಕ್ಷಿತಿಜ್ ಶೆಟ್ಟಿ ಕಟಾ ಹಾಗೂ ಫೈಟಿಂಗ್ ನಲ್ಲಿ ಬೆಳ್ಳಿ , ರಾಜೇಶ್ ಶಾಹೋ ಕಟಾದಲ್ಲಿ ಚಿನ್ನ ಫೈಟಿಂಗ್ ನಲ್ಲಿ ಬೆಳ್ಳಿ , ಮೊಹಮ್ಮದ್ ಫಾಝಿಮ್ ಕಟಾದಲ್ಲಿ ಚಿನ್ನ ಫೈಟಿಂಗ್ ನಲ್ಲಿ ಕಂಚು ಮತ್ತು ಹಲೀಮ ಹೈಫಾ ಕಟಾದಲ್ಲಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಹಾಗೆಯೇ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ ಫೈಟಿಂಗ್ ನಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ, ಮೊಹಮ್ಮದ್ ಅಜ್ಮಲ್ ಫೈಟಿಂಗ್ ನಲ್ಲಿ ಚಿನ್ನ ಕಟಾದಲ್ಲಿ ಬೆಳ್ಳಿ, ಶಹೀರ್ ಅನಾಸ್ ಮತ್ತು ಮೋಹನ್ ಬಜ ಕಟಾ ಹಾಗೂ ಫೈಟಿಂಗ್ ನಲ್ಲಿ ಬೆಳ್ಳಿ ಪದಕವನ್ನು ಪಡೆದು ತಾಲ್ಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ.

ಇವರು ರೆನ್ಶಿ ಮೊಹಮ್ಮದ್ ನದೀಮ್, ಶಿಹನ್ ಅಬ್ದುಲ್ ರಹಿಮಾನ್ ಹಾಗೂ ಸೆನ್ಸಾಯಿ ರಿಜ್ವಾನ್ ಇವರಿಂದ ತರಬೇತಿಯನ್ನು ಪಡೆದಿರುತ್ತಾರೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya
error: Content is protected !!