September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

ಉಜಿರೆ: ಗ್ರಾಮೀಣ ಪ್ರದೇಶದಲ್ಲಿ ನಗರಗಳಿಗೆ ಸೀಮಿತವಾದ ಆರೋಗ್ಯ ಸೇವೆಯನ್ನು ಉಜಿರೆಯ ಬೆನಕ ಆಸ್ಪತ್ರೆ ನೀಡುತ್ತಿದೆ ಎಂದು ಧರ್ಮಸ್ಥಳ ಕನ್ಯಾಡಿಯ ರಾಮಕ್ಷೇತ್ರದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಶ್ಲಾಘಿಸಿದರು.


ಶ್ರೀ ಸ್ವಾಮೀಜಿಯವರು ಅತ್ಯಾಧುನಿಕ ಇಮೇಜಿಂಗ್ ತಂತ್ರಜ್ಞಾನದ ಸಾಮರ್ಥ್ಯ ಹೊಂದಿರುವ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆಯನ್ನು ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ದೀಪ ಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿ ಆಶೀರ್ವಚನ ನೀಡುತ್ತಿದ್ದರು.
ಅವರು ಮಾತನಾಡುತ್ತಾ ಆರೋಗ್ಯ ಸೇವೆಯಲ್ಲಿ ರೋಗನಿರ್ಣಯ ಬಹುಮುಖ್ಯ. ಈ ನಿಟ್ಟಿನಲ್ಲಿ ಬೆನಕ ಆಸ್ಪತ್ರೆಯ ಅತ್ಯಾಧುನಿಕ ಸೇವೆಯು ಬೆಳ್ತಂಗಡಿ ತಾಲೂಕಿಗೆ ದೊಡ್ಡ ಕೊಡುಗೆ ಎಂದು ಅಭಿನಂದಿಸಿದರು.


ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ರೇಡಿಯೋಲಜಿಸ್ಟ್ ಡಾ.ಚಿದಾನಂದ ಅವರು ಮಾತನಾಡುತ್ತಾ ಹಲವು ವಿಶೇಷತೆಗಳ ಅಗತ್ಯತೆಗಳಿಗೆ ಸರಿಹೊಂದುವಂತೆ ಅನನ್ಯವಾಗಿ ವಿನ್ಯಾಸಗೊಳಿಸಲಾಗಿರುವ ಈ ತಂತ್ರಜ್ಞಾನ ಬಹುಮುಖ, ಕೈಗೆಟಕುವ, ಬಳಸಲು ಸುಲಭವಾದ ಹಾಗೂ ನಿಖರವಾಗಿ ರೋಗನಿರ್ಣಯ ಮಾಡಲು ಸಹಾಯಕವಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಮೊತ್ತಮೊದಲ ಬಾರಿಗೆ ಒದಗಿಸಲಾದ ಈ ಸೇವೆ ತಾಲೂಕಿನ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಹೆಜ್ಜೆ ಎಂದು ಅಭಿನಂದಿಸಿದರು.


ಬೆನಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಗೋಪಾಲಕೃಷ್ಣ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ತೀವ್ರ ಅನಾರೋಗ್ಯಕ್ಕೆ ಒಳಗಾದಾಗ ಅಂಗಾಂಶಗಳ ಅಂಗಗಳ ಅಸಾಮಾನ್ಯ ಭಾಗವನ್ನು ಮತ್ತು ದೇಹದ ಇತರ ರಚನೆಯನ್ನು ಈ ಯಂತ್ರದ ಮೂಲಕ ನಿಖರವಾಗಿ ಪತ್ತೆ ಮಾಡಲು ಸಾಧ್ಯವಾಗುತ್ತದೆ. ಗುಣಮಟ್ಟದ ಆರೋಗ್ಯ ಸೇವೆಯನ್ನು ಕೊಡಮಾಡುವ ಆಶಯಕ್ಕೆ ಅನುಗುಣವಾಗಿ ದಕ್ಷ ಹಾಗೂ ಆಧುನಿಕ ಇಮೇಜಿಂಗ್ ಸಾಮರ್ಥ್ಯದ ಅಲ್ಟ್ರಾಸೌಂಡ್ ಸೇವೆ ಒದಗಿಸಲಿದ್ದೇವೆ ಎಂದು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಯೋಧ್ಯೆಯ ಶ್ರೀ ಕೇಶವಜೀ ಮಹರಾಜ್ ಅವರು ಶುಭಹಾರೈಸಿದರು. ಕಳೆದ 15 ವರ್ಷಗಳಿಂದ ಪ್ರತಿ ರವಿವಾರ ಬೆನಕ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಸೇವೆಯನ್ನು ನೀಡುತ್ತಿರುವ ಡಾ.ಚಿದಾನಂದ ಮೂರ್ತಿ ಅವರನ್ನು ಶ್ರೀ ಸ್ವಾಮೀಜಿಯವರು ಶಾಲು ಹೊದಿಸಿ ಫಲಪುಷ್ಪಗಳನ್ನಿತ್ತು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಡಾ.ಗೋವಿಂದ ಕಿಶೋರ್, ಡಾ.ವಿನಯ ಕಿಶೋರ್, ಡಾ.ವಿಶ್ವವಿಜೇತ್, ಡಾ. ಅಂಕಿತಾ ಜಿ. ಭಟ್, ಸೀತಾರಾಮ ಭಟ್, ಕೃಷ್ಣಪ್ಪ ಗುಡಿಗಾರ್, ಮುರಳಿಕೃಷ್ಣ ಬೆಳಾಲ್, ಬೆನಕ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವಸ್ಯ ಹಾಗೂ ಆಸ್ಪತ್ರೆಯ ಸಿಬ್ಬಂಧಿ ವರ್ಗ ಉಪಸ್ಥಿತರಿದ್ದರು.

ಬೆನಕ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್.ಜಿ.ಭಟ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಡಾ.ಭಾರತಿ ಜಿ.ಕೆ ವಂದಿಸಿದರು.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya
error: Content is protected !!