25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಉಜಿರೆ: ಹಾಸನ ಡಿಸ್ಟ್ರಿಕ್ಟ್ ಕರಾಟೆ ಅಸೋಸಿಯೇಷನ್ (ರಿ),ಮೌಲ್ ಶೂಟೋಕಾನ್ ಕರಾಟೆ  ಡೊ ಅಸೋಸಿಯೇಷನ್ ಇಂಡಿಯಾ ಮತ್ತು ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಸಹಯೋಗದಲ್ಲಿ ಹಾಸನದ ಹಾಸನಾಂಬಾ ಇನ್ ಡೋರ್ ಸ್ಟೇಡಿಯಂ ನಲ್ಲಿ ಜ. 7ರಂದು ನಡೆದ ಹಾಸನ್ ಓಪನ್ 3 ನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿ- 2024 ರಲ್ಲಿ ವೈಯಕ್ತಿಕ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 5 ನೇ ತರಗತಿಯ ಮಹಮ್ಮದ್ ರಯ್ಯಾನ್ ಅವರು ಪ್ರಥಮ ಸ್ಥಾನ ಮತ್ತು 2  ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.           

 ಮಹಮ್ಮದ್ ರಯ್ಯಾನ್ ಅವರು ಉಜಿರೆಯ ಗಾಂಧಿನಗರ ನಿವಾಸಿ ಬಿ. ಎಚ್. ಇಬ್ರಾಹಿಂ ಮತ್ತು ನೂರ್ ಜಹಾನ್ ದಂಪತಿ ಪುತ್ರ ಮತ್ತು ಸೆನ್ಸಾಯ್ ಸಿಹಾನ್ ಅಬ್ದುಲ್ ರಹಮಾನ್ ಅವರಿಂದ ತರಬೇತಿ ಪಡೆದಿದ್ದರು. ಅವರು ಶೋರಿನ್ ರಿಯೋ ಕರಾಟೆ ಅಸೋಸಿಯೇಷನ್ ಆಶ್ರಯದಲ್ಲಿ ಮೂಡಬಿದ್ರಿಯಲ್ಲಿ ನಡೆದ ರಾಜ್ಯ ಮಟ್ಟದ 2೦ನೇ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು.                     

ಹಾಸನದ ಶಾಸಕ ಸ್ವರೂಪ ಪ್ರಕಾಶ್,ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್  ಅಧ್ಯಕ್ಷ ಕ್ಯೋಶಿ  ಎಂ. ಅಲ್ತಾಫ್ ಪಾಷಾ,.ಕರಾಟೆ ಅಸೋಸಿಯೇಷನ್ ಜನರಲ್ ಸೆಕ್ರೆಟರಿ, ಪಂದ್ಯಾವಳಿ ನಿರ್ದೇಶಕ ರೆನ್ಷಿ ಶಿವಮೊಗ್ಗ ವಿನೋದ್ ಮತ್ತು ಹಾಸನ ಜಿಲ್ಲಾ ಕರಾಟೆ ಅಸೋಸಿಯೇಷನ್ ಅಧ್ಯಕ್ಷ,ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೆನ್ಸಾಯಿ ಮಹಮ್ಮದ್ ಆರಿಫ್ ಪ್ರಶಸ್ಥಿ ಪತ್ರ ಮತ್ತು ಚಿನ್ನದ ಪದಕ ತೊಡಿಸಿ ಅಭಿನಂದಿಸಿ ಗೌರವಿಸಿದರು.

Related posts

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya
error: Content is protected !!