22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

ಚಾರ್ಮಾಡಿ : ಇಲ್ಲಿಯ ಸರ್ಪಹಿತ್ಲು ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.07 ಮತ್ತು ಜ.08 ರಂದು ಶ್ರೀ ಕ್ಷೇತ್ರ ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಪಾಧ್ಯಾಯರ ದಿವ್ಯ ಹಸ್ತದಿಂದ ನೆರವೇರಿತು.

ಜ.07 ರಂದು ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮವು ನಡೆದು, ಸಂಜೆ 7:00ಕ್ಕೆ ಸರಿಯಾಗಿ ಅವು ಕಾರ್ ಗುತ್ತಿನ ಮನೆಯಿಂದ ಕ್ಷೇತ್ರಕ್ಕೆ ಭಂಡಾರ ತರುವ ಮೂಲಕ ದೈವಗಳ ನೇಮೋತ್ಸವ ನಡೆಯಿತು. ಜ.08 ರಂದು ಮಧ್ಯಾಹ್ನ ನಾಗತಂಬಿಲ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು.

ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕ ಮಧುಸೂದನ್ ಭಟ್, ಅಧ್ಯಕ್ಷ ಕೊರಗಪ್ಪ ಗೌಡ, ಕಾರ್ಯದರ್ಶಿ ದಿವಿನೇಶ್ ಮೈಕಾನ್ ಹಾಗೂ ಸರ್ವಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ಶ್ರೀ ನಾಳ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಮಳೆಗೆ ಕೃತಕ ಕೆರೆಯಂತಾದ ಕಕ್ಕಿಂಜೆ–ನೆರಿಯ ರಸ್ತೆ

Suddi Udaya

ಶುಭವಿವಾಹ ಪ್ರತಿಭಾ-ಸುಕೇಶ್

Suddi Udaya
error: Content is protected !!