September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

ಚಾರ್ಮಾಡಿ : ಇಲ್ಲಿಯ ಸರ್ಪಹಿತ್ಲು ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.07 ಮತ್ತು ಜ.08 ರಂದು ಶ್ರೀ ಕ್ಷೇತ್ರ ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಪಾಧ್ಯಾಯರ ದಿವ್ಯ ಹಸ್ತದಿಂದ ನೆರವೇರಿತು.

ಜ.07 ರಂದು ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮವು ನಡೆದು, ಸಂಜೆ 7:00ಕ್ಕೆ ಸರಿಯಾಗಿ ಅವು ಕಾರ್ ಗುತ್ತಿನ ಮನೆಯಿಂದ ಕ್ಷೇತ್ರಕ್ಕೆ ಭಂಡಾರ ತರುವ ಮೂಲಕ ದೈವಗಳ ನೇಮೋತ್ಸವ ನಡೆಯಿತು. ಜ.08 ರಂದು ಮಧ್ಯಾಹ್ನ ನಾಗತಂಬಿಲ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು.

ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕ ಮಧುಸೂದನ್ ಭಟ್, ಅಧ್ಯಕ್ಷ ಕೊರಗಪ್ಪ ಗೌಡ, ಕಾರ್ಯದರ್ಶಿ ದಿವಿನೇಶ್ ಮೈಕಾನ್ ಹಾಗೂ ಸರ್ವಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ಮುಂಡಾಜೆ ಶಾಂಭವಿ ರೈ ನಿಧನ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Suddi Udaya
error: Content is protected !!