ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಹಾಸನ ಡಿಸ್ಟ್ರಿಕ್ಟ್ ಕರಾಟೆ ಅಸೋಸಿಯೇಷನ್ (ರಿ),ಮೌಲ್ ಶೂಟೋಕಾನ್ ಕರಾಟೆ   ಡೊ  ಅಸೋಸಿಯೇಷನ್ ಇಂಡಿಯಾ ಮತ್ತು ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಸಹಯೋಗದಲ್ಲಿ ಹಾಸನದ ಹಾಸನಾಂಬಾ ಇನ್ ಡೋರ್ ಸ್ಟೇಡಿಯಂ ನಲ್ಲಿ ಜ. 7ರಂದು ನಡೆದ ಹಾಸನ್ ಓಪನ್ 3 ನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿ- 2024 ರಲ್ಲಿ ವೈಯಕ್ತಿಕ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ನಿಶಾನ್ ಹೆಚ್. ಪೂಜಾರಿ ಅವರು ಪ್ರಥಮ ಸ್ಥಾನ ಮತ್ತು 2  ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.             

ನಿಶಾನ್  ಅವರು ಉಜಿರೆಯ ಬರಮೇಲು ನಿವಾಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು ಹಾಗೂ ಯಾಧವಿ ದಂಪತಿ ಪುತ್ರ .

ಸೆನ್ಸಾಯ್ ಸಿಹಾನ್ ಅಬ್ದುಲ್ ರಹಮಾನ್ ಅವರಿಂದ ತರಬೇತಿ ಪಡೆದಿದ್ದರು.

Leave a Comment

error: Content is protected !!