38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

ನೆರಿಯ ಗ್ರಾಮದ ಕುಲೆನಾಡಿ ಎಂಬಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಸ್ಥಳೀಯ ಅಶೋಕ್ ಕುಮಾರ್(59) ಎಂಬ ವ್ಯಕ್ತಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು,ಬೇಟೆಗೆ ಬಳಸಿದ ಬಂದೂಕು ಹಾಗೂ 5 ಕೆಜಿ ಮಾಂಸ ಹಾಗೂ ಬೇಟೆಗೆ ಸಂಬಂಧಿಸಿದ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಕೇಸು ದಾಖಲಿಸಿದೆ. ಆರೋಪಿಯ ಮನೆಯಿಂದ ನಾಲ್ಕು ಕಿಮೀ ದೂರದಲ್ಲಿರುವ ಚಾರ್ಮಾಡಿ-ಕನಪಾಡಿ ಮೀಸಲು ಅರಣ್ಯ ಪ್ರದೇಶದ ಪೆರ್ನಾಳೆ ಕೆರೆಯಿಂದ ಒಂದಿಷ್ಟು ದೂರದಲ್ಲಿ ಅಶೋಕ್ ಕುಮಾರ್ ಹಾಗೂ ಇತರರು ಕಡವೆಯನ್ನು ಬೇಟೆಯಾಡಿ ಮಾಂಸ ಮಾಡಿರುವ ಬಗ್ಗೆ ಶಂಕೆ ಇದ್ದು, ಸ್ಥಳದಲ್ಲಿ ಚರ್ಮ, ತಲೆಯ ಹಾಗೂ ಕಾಲಿನ ಭಾಗಗಳು ಮತ್ತು ಇನ್ನಿತರ ಅವಯವಗಳು ಪತ್ತೆಯಾಗಿವೆ. ಬೇಟೆಯಾಡಿದ ತಂಡದಲ್ಲಿ ಇತರರು ಇರುವ ಅನುಮಾನ ವ್ಯಕ್ತವಾಗಿದ್ದು ತನಿಖೆ ಮುಂದುವರೆದಿದೆ.

ಆರ್ ಎಫ್ ಒ ಬಿ.ಜಿ.ಮೋಹನ್ ಕುಮಾರ್ ನೇತೃತ್ವದಲ್ಲಿ ಡಿಆರ್ ಎಫ್ ಒ ಗಳಾದ ಯತೀಂದ್ರ,ಹರಿಪ್ರಸಾದ್, ಭವಾನಿ ಶಂಕರ್, ರಾಘವೇಂದ್ರ, ಪಾಂಡುರಂಗ ಕಮತಿ, ಬಾಲಕೃಷ್ಣ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!