25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

ನೆರಿಯ ಗ್ರಾಮದ ಕುಲೆನಾಡಿ ಎಂಬಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಸ್ಥಳೀಯ ಅಶೋಕ್ ಕುಮಾರ್(59) ಎಂಬ ವ್ಯಕ್ತಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು,ಬೇಟೆಗೆ ಬಳಸಿದ ಬಂದೂಕು ಹಾಗೂ 5 ಕೆಜಿ ಮಾಂಸ ಹಾಗೂ ಬೇಟೆಗೆ ಸಂಬಂಧಿಸಿದ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಕೇಸು ದಾಖಲಿಸಿದೆ. ಆರೋಪಿಯ ಮನೆಯಿಂದ ನಾಲ್ಕು ಕಿಮೀ ದೂರದಲ್ಲಿರುವ ಚಾರ್ಮಾಡಿ-ಕನಪಾಡಿ ಮೀಸಲು ಅರಣ್ಯ ಪ್ರದೇಶದ ಪೆರ್ನಾಳೆ ಕೆರೆಯಿಂದ ಒಂದಿಷ್ಟು ದೂರದಲ್ಲಿ ಅಶೋಕ್ ಕುಮಾರ್ ಹಾಗೂ ಇತರರು ಕಡವೆಯನ್ನು ಬೇಟೆಯಾಡಿ ಮಾಂಸ ಮಾಡಿರುವ ಬಗ್ಗೆ ಶಂಕೆ ಇದ್ದು, ಸ್ಥಳದಲ್ಲಿ ಚರ್ಮ, ತಲೆಯ ಹಾಗೂ ಕಾಲಿನ ಭಾಗಗಳು ಮತ್ತು ಇನ್ನಿತರ ಅವಯವಗಳು ಪತ್ತೆಯಾಗಿವೆ. ಬೇಟೆಯಾಡಿದ ತಂಡದಲ್ಲಿ ಇತರರು ಇರುವ ಅನುಮಾನ ವ್ಯಕ್ತವಾಗಿದ್ದು ತನಿಖೆ ಮುಂದುವರೆದಿದೆ.

ಆರ್ ಎಫ್ ಒ ಬಿ.ಜಿ.ಮೋಹನ್ ಕುಮಾರ್ ನೇತೃತ್ವದಲ್ಲಿ ಡಿಆರ್ ಎಫ್ ಒ ಗಳಾದ ಯತೀಂದ್ರ,ಹರಿಪ್ರಸಾದ್, ಭವಾನಿ ಶಂಕರ್, ರಾಘವೇಂದ್ರ, ಪಾಂಡುರಂಗ ಕಮತಿ, ಬಾಲಕೃಷ್ಣ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!