April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

ನೆರಿಯ ಗ್ರಾಮದ ಕುಲೆನಾಡಿ ಎಂಬಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಸ್ಥಳೀಯ ಅಶೋಕ್ ಕುಮಾರ್(59) ಎಂಬ ವ್ಯಕ್ತಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು,ಬೇಟೆಗೆ ಬಳಸಿದ ಬಂದೂಕು ಹಾಗೂ 5 ಕೆಜಿ ಮಾಂಸ ಹಾಗೂ ಬೇಟೆಗೆ ಸಂಬಂಧಿಸಿದ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಕೇಸು ದಾಖಲಿಸಿದೆ. ಆರೋಪಿಯ ಮನೆಯಿಂದ ನಾಲ್ಕು ಕಿಮೀ ದೂರದಲ್ಲಿರುವ ಚಾರ್ಮಾಡಿ-ಕನಪಾಡಿ ಮೀಸಲು ಅರಣ್ಯ ಪ್ರದೇಶದ ಪೆರ್ನಾಳೆ ಕೆರೆಯಿಂದ ಒಂದಿಷ್ಟು ದೂರದಲ್ಲಿ ಅಶೋಕ್ ಕುಮಾರ್ ಹಾಗೂ ಇತರರು ಕಡವೆಯನ್ನು ಬೇಟೆಯಾಡಿ ಮಾಂಸ ಮಾಡಿರುವ ಬಗ್ಗೆ ಶಂಕೆ ಇದ್ದು, ಸ್ಥಳದಲ್ಲಿ ಚರ್ಮ, ತಲೆಯ ಹಾಗೂ ಕಾಲಿನ ಭಾಗಗಳು ಮತ್ತು ಇನ್ನಿತರ ಅವಯವಗಳು ಪತ್ತೆಯಾಗಿವೆ. ಬೇಟೆಯಾಡಿದ ತಂಡದಲ್ಲಿ ಇತರರು ಇರುವ ಅನುಮಾನ ವ್ಯಕ್ತವಾಗಿದ್ದು ತನಿಖೆ ಮುಂದುವರೆದಿದೆ.

ಆರ್ ಎಫ್ ಒ ಬಿ.ಜಿ.ಮೋಹನ್ ಕುಮಾರ್ ನೇತೃತ್ವದಲ್ಲಿ ಡಿಆರ್ ಎಫ್ ಒ ಗಳಾದ ಯತೀಂದ್ರ,ಹರಿಪ್ರಸಾದ್, ಭವಾನಿ ಶಂಕರ್, ರಾಘವೇಂದ್ರ, ಪಾಂಡುರಂಗ ಕಮತಿ, ಬಾಲಕೃಷ್ಣ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya
error: Content is protected !!