24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

ನೆರಿಯ ಗ್ರಾಮದ ಕುಲೆನಾಡಿ ಎಂಬಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಸ್ಥಳೀಯ ಅಶೋಕ್ ಕುಮಾರ್(59) ಎಂಬ ವ್ಯಕ್ತಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು,ಬೇಟೆಗೆ ಬಳಸಿದ ಬಂದೂಕು ಹಾಗೂ 5 ಕೆಜಿ ಮಾಂಸ ಹಾಗೂ ಬೇಟೆಗೆ ಸಂಬಂಧಿಸಿದ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಕೇಸು ದಾಖಲಿಸಿದೆ. ಆರೋಪಿಯ ಮನೆಯಿಂದ ನಾಲ್ಕು ಕಿಮೀ ದೂರದಲ್ಲಿರುವ ಚಾರ್ಮಾಡಿ-ಕನಪಾಡಿ ಮೀಸಲು ಅರಣ್ಯ ಪ್ರದೇಶದ ಪೆರ್ನಾಳೆ ಕೆರೆಯಿಂದ ಒಂದಿಷ್ಟು ದೂರದಲ್ಲಿ ಅಶೋಕ್ ಕುಮಾರ್ ಹಾಗೂ ಇತರರು ಕಡವೆಯನ್ನು ಬೇಟೆಯಾಡಿ ಮಾಂಸ ಮಾಡಿರುವ ಬಗ್ಗೆ ಶಂಕೆ ಇದ್ದು, ಸ್ಥಳದಲ್ಲಿ ಚರ್ಮ, ತಲೆಯ ಹಾಗೂ ಕಾಲಿನ ಭಾಗಗಳು ಮತ್ತು ಇನ್ನಿತರ ಅವಯವಗಳು ಪತ್ತೆಯಾಗಿವೆ. ಬೇಟೆಯಾಡಿದ ತಂಡದಲ್ಲಿ ಇತರರು ಇರುವ ಅನುಮಾನ ವ್ಯಕ್ತವಾಗಿದ್ದು ತನಿಖೆ ಮುಂದುವರೆದಿದೆ.

ಆರ್ ಎಫ್ ಒ ಬಿ.ಜಿ.ಮೋಹನ್ ಕುಮಾರ್ ನೇತೃತ್ವದಲ್ಲಿ ಡಿಆರ್ ಎಫ್ ಒ ಗಳಾದ ಯತೀಂದ್ರ,ಹರಿಪ್ರಸಾದ್, ಭವಾನಿ ಶಂಕರ್, ರಾಘವೇಂದ್ರ, ಪಾಂಡುರಂಗ ಕಮತಿ, ಬಾಲಕೃಷ್ಣ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪ್ರಧಾನ

Suddi Udaya

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!