25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

ನೆರಿಯ ಗ್ರಾಮದ ಕುಲೆನಾಡಿ ಎಂಬಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಸ್ಥಳೀಯ ಅಶೋಕ್ ಕುಮಾರ್(59) ಎಂಬ ವ್ಯಕ್ತಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು,ಬೇಟೆಗೆ ಬಳಸಿದ ಬಂದೂಕು ಹಾಗೂ 5 ಕೆಜಿ ಮಾಂಸ ಹಾಗೂ ಬೇಟೆಗೆ ಸಂಬಂಧಿಸಿದ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಕೇಸು ದಾಖಲಿಸಿದೆ. ಆರೋಪಿಯ ಮನೆಯಿಂದ ನಾಲ್ಕು ಕಿಮೀ ದೂರದಲ್ಲಿರುವ ಚಾರ್ಮಾಡಿ-ಕನಪಾಡಿ ಮೀಸಲು ಅರಣ್ಯ ಪ್ರದೇಶದ ಪೆರ್ನಾಳೆ ಕೆರೆಯಿಂದ ಒಂದಿಷ್ಟು ದೂರದಲ್ಲಿ ಅಶೋಕ್ ಕುಮಾರ್ ಹಾಗೂ ಇತರರು ಕಡವೆಯನ್ನು ಬೇಟೆಯಾಡಿ ಮಾಂಸ ಮಾಡಿರುವ ಬಗ್ಗೆ ಶಂಕೆ ಇದ್ದು, ಸ್ಥಳದಲ್ಲಿ ಚರ್ಮ, ತಲೆಯ ಹಾಗೂ ಕಾಲಿನ ಭಾಗಗಳು ಮತ್ತು ಇನ್ನಿತರ ಅವಯವಗಳು ಪತ್ತೆಯಾಗಿವೆ. ಬೇಟೆಯಾಡಿದ ತಂಡದಲ್ಲಿ ಇತರರು ಇರುವ ಅನುಮಾನ ವ್ಯಕ್ತವಾಗಿದ್ದು ತನಿಖೆ ಮುಂದುವರೆದಿದೆ.

ಆರ್ ಎಫ್ ಒ ಬಿ.ಜಿ.ಮೋಹನ್ ಕುಮಾರ್ ನೇತೃತ್ವದಲ್ಲಿ ಡಿಆರ್ ಎಫ್ ಒ ಗಳಾದ ಯತೀಂದ್ರ,ಹರಿಪ್ರಸಾದ್, ಭವಾನಿ ಶಂಕರ್, ರಾಘವೇಂದ್ರ, ಪಾಂಡುರಂಗ ಕಮತಿ, ಬಾಲಕೃಷ್ಣ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya
error: Content is protected !!