September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

ನೆರಿಯ ಗ್ರಾಮದ ಕುಲೆನಾಡಿ ಎಂಬಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಸ್ಥಳೀಯ ಅಶೋಕ್ ಕುಮಾರ್(59) ಎಂಬ ವ್ಯಕ್ತಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು,ಬೇಟೆಗೆ ಬಳಸಿದ ಬಂದೂಕು ಹಾಗೂ 5 ಕೆಜಿ ಮಾಂಸ ಹಾಗೂ ಬೇಟೆಗೆ ಸಂಬಂಧಿಸಿದ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಕೇಸು ದಾಖಲಿಸಿದೆ. ಆರೋಪಿಯ ಮನೆಯಿಂದ ನಾಲ್ಕು ಕಿಮೀ ದೂರದಲ್ಲಿರುವ ಚಾರ್ಮಾಡಿ-ಕನಪಾಡಿ ಮೀಸಲು ಅರಣ್ಯ ಪ್ರದೇಶದ ಪೆರ್ನಾಳೆ ಕೆರೆಯಿಂದ ಒಂದಿಷ್ಟು ದೂರದಲ್ಲಿ ಅಶೋಕ್ ಕುಮಾರ್ ಹಾಗೂ ಇತರರು ಕಡವೆಯನ್ನು ಬೇಟೆಯಾಡಿ ಮಾಂಸ ಮಾಡಿರುವ ಬಗ್ಗೆ ಶಂಕೆ ಇದ್ದು, ಸ್ಥಳದಲ್ಲಿ ಚರ್ಮ, ತಲೆಯ ಹಾಗೂ ಕಾಲಿನ ಭಾಗಗಳು ಮತ್ತು ಇನ್ನಿತರ ಅವಯವಗಳು ಪತ್ತೆಯಾಗಿವೆ. ಬೇಟೆಯಾಡಿದ ತಂಡದಲ್ಲಿ ಇತರರು ಇರುವ ಅನುಮಾನ ವ್ಯಕ್ತವಾಗಿದ್ದು ತನಿಖೆ ಮುಂದುವರೆದಿದೆ.

ಆರ್ ಎಫ್ ಒ ಬಿ.ಜಿ.ಮೋಹನ್ ಕುಮಾರ್ ನೇತೃತ್ವದಲ್ಲಿ ಡಿಆರ್ ಎಫ್ ಒ ಗಳಾದ ಯತೀಂದ್ರ,ಹರಿಪ್ರಸಾದ್, ಭವಾನಿ ಶಂಕರ್, ರಾಘವೇಂದ್ರ, ಪಾಂಡುರಂಗ ಕಮತಿ, ಬಾಲಕೃಷ್ಣ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶೃಂಗೇರಿ ಶಾರದಾ ಮಠಕ್ಕೆ ಭೇಟಿ, ಪುಂಡಿ ಪಣವು ಸಮರ್ಪಣೆ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya
error: Content is protected !!