September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

ನೆರಿಯ ಗ್ರಾಮದ ಕುಲೆನಾಡಿ ಎಂಬಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಸ್ಥಳೀಯ ಅಶೋಕ್ ಕುಮಾರ್(59)ಎಂಬ ವ್ಯಕ್ತಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು,ಬೇಟೆಗೆ ಬಳಸಿದ ಬಂದೂಕು ಹಾಗು 5 ಕೆಜಿ ಮಾಂಸ ಹಾಗು ಬೇಟೆಗೆ ಸಂಬಂಧಿಸಿದ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಕೇಸು ದಾಖಲಿಸಿದ್ದು ಇದರ ಪ್ರಕರಣ ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಯ ಮನೆಯಿಂದ ನಾಲ್ಕು ಕಿಮೀ ದೂರದಲ್ಲಿರುವ ಚಾರ್ಮಾಡಿ-ಕನಪಾಡಿ ಮೀಸಲು ಅರಣ್ಯ ಪ್ರದೇಶದ ಪೆರ್ನಾಳೆ ಕೆರೆಯಿಂದ ಒಂದಿಷ್ಟು ದೂರದಲ್ಲಿ ಅಶೋಕ್ ಕುಮಾರ್ ಹಾಗೂ ಇತರರು ಕಡವೆಯನ್ನು ಬೇಟೆಯಾಡಿ ಮಾಂಸ ಮಾಡಿರುವ ಬಗ್ಗೆ ಶಂಕೆ ಇದ್ದು,ಸ್ಥಳದಲ್ಲಿ ಚರ್ಮ,ತಲೆಯ ಹಾಗೂ ಕಾಲಿನ ಭಾಗಗಳು ಮತ್ತು ಇನ್ನಿತರ ಅವಯವಗಳು ಪತ್ತೆಯಾಗಿವೆ. ಬೇಟೆಯಾಡಿದ ತಂಡದಲ್ಲಿ ಇತರರು ಇರುವ ಅನುಮಾನ ವ್ಯಕ್ತವಾಗಿದ್ದು ತನಿಖೆ ಮುಂದುವರೆದಿದೆ.

Related posts

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya
error: Content is protected !!