23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

ನೆರಿಯ ಗ್ರಾಮದ ಕುಲೆನಾಡಿ ಎಂಬಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಸ್ಥಳೀಯ ಅಶೋಕ್ ಕುಮಾರ್(59)ಎಂಬ ವ್ಯಕ್ತಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು,ಬೇಟೆಗೆ ಬಳಸಿದ ಬಂದೂಕು ಹಾಗು 5 ಕೆಜಿ ಮಾಂಸ ಹಾಗು ಬೇಟೆಗೆ ಸಂಬಂಧಿಸಿದ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಕೇಸು ದಾಖಲಿಸಿದ್ದು ಇದರ ಪ್ರಕರಣ ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಯ ಮನೆಯಿಂದ ನಾಲ್ಕು ಕಿಮೀ ದೂರದಲ್ಲಿರುವ ಚಾರ್ಮಾಡಿ-ಕನಪಾಡಿ ಮೀಸಲು ಅರಣ್ಯ ಪ್ರದೇಶದ ಪೆರ್ನಾಳೆ ಕೆರೆಯಿಂದ ಒಂದಿಷ್ಟು ದೂರದಲ್ಲಿ ಅಶೋಕ್ ಕುಮಾರ್ ಹಾಗೂ ಇತರರು ಕಡವೆಯನ್ನು ಬೇಟೆಯಾಡಿ ಮಾಂಸ ಮಾಡಿರುವ ಬಗ್ಗೆ ಶಂಕೆ ಇದ್ದು,ಸ್ಥಳದಲ್ಲಿ ಚರ್ಮ,ತಲೆಯ ಹಾಗೂ ಕಾಲಿನ ಭಾಗಗಳು ಮತ್ತು ಇನ್ನಿತರ ಅವಯವಗಳು ಪತ್ತೆಯಾಗಿವೆ. ಬೇಟೆಯಾಡಿದ ತಂಡದಲ್ಲಿ ಇತರರು ಇರುವ ಅನುಮಾನ ವ್ಯಕ್ತವಾಗಿದ್ದು ತನಿಖೆ ಮುಂದುವರೆದಿದೆ.

Related posts

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya

ಪಜಿರಡ್ಕ: ನೀರುಪಾಲಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

Suddi Udaya
error: Content is protected !!