July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ ಕಾರ್ಯಕ್ರಮವು ಜ. 6 ರಂದು ನಡೆಯಿತು.

ಸಂಜೆ ನಡೆದ ಸಭಾಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ವಹಿಸಿದರು.

ಅಭ್ಯಾಗತರಾಗಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ತುಮಕೂರು ಪತ್ರಿಕೋದ್ಯಮ & ಸಮೂಹ ಸಂವಹನ ಮುಖ್ಯಸ್ಥ ಡಾ| ಸಿಬಂತಿ ಪದ್ಮನಾಭ ಕೆ.ವಿ., ಬರೆಂಗಾಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈ.ಲಿ ಮಾಲಕ ಅವಿನಾಶ್ ರಾವ್, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಕೃಷಿಕ ಮಧುಕರ ರಾವ್ ಮಚ್ಚಳೆ ನಿಡ್ಲೆ, ಸೌತಡ್ಕ ಶ್ರೀಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಹತ್ಯಡ್ಕ ಪ್ರಾ.ಕೃ.ಪ.ಸ.ಸಂಘ ಅಧ್ಯಕ್ಷ ರಾಘವೇಂದ್ರ ನಾಯಕ್ ಬರ್ಗುಳ, ಬೆಳ್ತಂಗಡಿ ನಿವೃತ್ತ ಕ್ಷೇತ್ರ ಸಮನ್ವಯಾಧಿಕಾರಿ ಗಣೇಶ್ ಐತಾಳ್, ಸೌತಡ್ಕ ನೈಮಿಷ ಹೌಸ್ ಆಫ್ ಸ್ಪೈಸಸ್ ಮಾಲಕ ಬಾಲಕೃಷ್ಣ, ಪಟ್ಟೂರು ವಿಷ್ಣುಮೂರ್ತಿ ಶಾಲೆಯ ಸ್ಥಾಪಕ ಸದಸ್ಯ ಕೃಷ್ಣಮೂರ್ತಿ ಭಟ್ ಕಳಂದೂರು, ಶಾಲಾ ಅಧ್ಯಕ್ಷ ಚಂದ್ರ ಶೇಖರ ಗೌಡ ಧರ್ಮದಕಳ, ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ದೇರಾಜೆ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮೆಸ್ಕಾಂ ಪವರ್ ಮ್ಯಾನ್ ಅಶೋಕ್ ರಾಥೋಡ್, ಪಟ್ಟೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸುಗಂಧಿನಿ, ನೇಸರ ಯೂಟ್ಯೂಬ್ ಚಾನಲ್ ನ ಪ್ರಶಾಂತ್, ಸುದ್ದಿ ಉದಯ ಪತ್ರಿಕೆಯ ಪಿ. ತಿಮ್ಮಪ್ಪ ಗೌಡ, ಕೇಶವ ಹಳ್ಳಿಂಗೇರಿ, ಸತೀಶ್ ಎಲಿಕಳ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಚಂದ್ರಶೇಖರ್ ಶೇಟ್, ಪಟ್ಟೂರು ಮಾತೃಭಾರತಿ ಶ್ರೀರಾಮ ವಿದ್ಯಾಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ದಿವ್ಯ, ಪೋಷಕ-ರಕ್ಷಕ ಸಂಘದ ಅಧ್ಯಕ್ಷ ರಮೇಶ್ ಗೌಡ, ಪದಾಧಿಕಾರಿಗಳು ಹಾಗೂ ವಿವಿಧ ಸಮಿತಿಯ ಸದಸ್ಯರು, ಶಿಕ್ಷಕ ವರ್ಗ, ಬೋಧಕೇತರ ಸಿಬ್ಬಂದಿ, ಪೋಷಕ ವೃಂದ, ವಿದ್ಯಾರ್ಥಿ ವೃಂದ, ಹಿರಿಯ ವಿದ್ಯಾರ್ಥಿ ವೃಂದ, ಸಹಕರಿಸಿದರು.

ಪ್ರಶಾಂತ್ ಶೆಟ್ಟಿ ದೇರಾಜೆ ಸ್ವಾಗತಿಸಿ, ವೃಶಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿದರು. ಗಣೇಶ್ ಕೆ. ಧನ್ಯವಾದವಿತ್ತರು.

ಸಂಜೆ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಹಾಗೂ ಯಕ್ಷಗಾನ ‘ದಕ್ಷಯಜ್ಞ’ ನಡೆಯಿತು.

Related posts

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ಸೆಂಟರ್ ನಲ್ಲಿ ಮನ್ಶಊಲ್ ಬಯಾನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅನುದಾನ: ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!