37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

ಬೆಳ್ತಂಗಡಿ : ಗರ್ಭಿಣಿ ಮಹಿಳೆಯರಿಗೆ ವಿವಿಧ ರೋಗದ ಬಗ್ಗೆ ಆರೋಗ್ಯ ಇಲಾಖೆಯಿಂದ ಆರೋಗ್ಯ ಜಾಗೃತಿ ಕಾರ್ಯಾಗಾರ ಹಾಗೂ ಕಾರ್ಯಕ್ರಮದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ 40 ಮಂದಿ ಗರ್ಭಿಣಿ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಜ.9 ರಂದು ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಜರುಗಿತು.

ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ತಾಯಿಯಿಂದ ಮಗುವಿಗೆ ಹರಡುವ ಹೆಚ್.ಐ.ವಿ, ಸಿಫಿಲಿಸ್ ಮತ್ತು ಹೆಪಟೈಟಿಸ್ ನಿರ್ಮೂಲನೆ ಆಂದೋಲನೆ ಕಾರ್ಯಕ್ರಮದ ಮೂಲಕ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬೆಳ್ತಂಗಡಿ ತಾಲೂಕಿನ ಸುಮಾರು 40 ಗರ್ಭಿಣಿ ತಾಯಂದಿರಿಗೆ ಆರೋಗ್ಯ ಇಲಾಖೆ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಕಾಂತ್ ವಹಿಸಿದ್ದರು. ನೇತ್ರ ತಜ್ಞರಾದ ಡಾ.ರಮೇಶ್, ದಂತ ವೈದ್ಯರಾದ ಡಾ.ಹೇಮಲತಾ, ಸ್ತ್ರೀ ರೋಗ ತಜ್ಞ ಜಾನೀಸ್, ಐಸಿಟಿಸಿ ಆಪ್ತ ಸಮಾಲೋಚಕ ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಧರ್ಮಪಾಲ್ ಭಾಗವಹಿಸಿದರು. ಬೆಳ್ತಂಗಡಿ ಟಿ.ಹೆಚ್.ಓ ಕಚೇರಿಯ ಸಿಬ್ಬಂದಿ ಅಜಯ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya
error: Content is protected !!